Times of ಕರ್ನಾಟಕ

Sarojini Naidu Information in Kannada- ‘ಭಾರತದ ಕೋಗಿಲೆ’ ಸರೋಜಿನಿ ನಾಯ್ಡು

‘ಭಾರತದ ಕೋಗಿಲೆ’ ಎಂದು ಪ್ರಸಿದ್ಧರಾದ ಕವಯತ್ರಿ, ಬರಹಗಾರ್ತಿ, ಸಾಮಾಜಿಕ ಕಾರ್ಯಕರ್ತೆ, ಸ್ವಾತಂತ್ರ ಹೋರಾಟಗಾರ್ತಿ ಸರೋಜಿನಿ ನಾಯ್ಡು ಅವರು ಫೆಬ್ರವರಿ 13, 1879ರಂದು ಹೈದರಾಬಾದಿನಲ್ಲಿ ಜನಿಸಿದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಪ್ರಥಮ ಮಹಿಳಾ ಅಧ್ಯಕ್ಷೆ ಹಾಗೂ ಉತ್ತರ ಪ್ರದೇಶದ ಪ್ರಥಮ ರಾಜ್ಯಪಾಲರಾದ ಹೆಗ್ಗಳಿಕೆಗೆ ಪಾತ್ರರಾದವರು.ಸರೋಜಿನಿಯವರ ತಂದೆ ಅಘೋರನಾಥ ಚಟ್ಟೋಪಾಧ್ಯಾಯರು ವಿಜ್ಞಾನಿ ಮತ್ತು ತತ್ವಶಾಸ್ತ್ರಜ್ಞರು....

ಫೆ.13 ರಂದು ಜಾನಪದ ಸಂಗೀತ ಉತ್ಸವ – ಕೂಚಬಾಳ

ಸಿಂದಗಿ: ತಾಲೂಕಿನ ಯರಗಲ್ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ವಿಜಯಪುರ ಇವುಗಳ ಸಹಯೋಗದಲ್ಲಿ ಫೇ 13 ರಂದು ಸಾಯಂಕಾಲ 7 ಗಂಟೆಗೆ ಜಾನಪದ ಸಂಗೀತ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ...

ಧರ್ಮಗುರುಗಳು ಮಾನವೀಯ ಮೌಲ್ಯಗಳ ಪೋಷಕರು: ಹಾಸಿಂಪೀರ

ಸಿಂದಗಿ: ಧರ್ಮಗುರುಗಳು ಮಾನವೀಯ ಮೌಲ್ಯಗಳ ಪೋಷಕರಾಗಿದ್ದಾರೆ. ದಾನ . ಧರ್ಮ. ಸಂಸ್ಕೃತಿ ಉಳಿಸಿ ಬೆಳೆಸಿದ್ದಾರೆ. ಧರ್ಮ ಗುರುಗಳ ಸೇವೆ ಸ್ಮರಣಿಯ ಎಂದು ಕನ್ನಡ ಸಾಹಿತ್ಯ ಪರಿಷತ್ತ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕಿನ ಆಸಂಗಿಹಾಳ ಆರೂಢ ಆಶ್ರಮದಲ್ಲಿ ಸಮರ್ಥ ಜಗದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ನಿಮಿತ್ತ ಮುಗಳಖೋಡ ಯಲ್ಲಾರಲಿಂಗ ಮಹಾರಾಜರ...

ಇಂಗ್ಲಿಷ ಕಲಿಕೆ ಮತ್ತು ವ್ಯಕ್ತಿತ್ವ ವಿಕಸನದ ಸಮಾರೋಪ ಸಮಾರಂಭ ಕಾರ್ಯಕ್ರಮ

ಮೂಡಲಗಿ: ವಿದ್ಯಾರ್ಥಿಗಳು ಹತ್ತು ದಿನದ ಇಂಗ್ಲಿಷ ಕಲಿಕೆ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಯಲ್ಲಿ ಕಲಿತ ಪಾಂಡಿತ್ಯವನ್ನು ತಮ್ಮ ಜೀವನದಲ್ಲಿ ಇಂಗ್ಲೀಷಿನ ಬಳಕೆ ಹಾಗೂ ವ್ಯಕ್ತಿತ್ವ ವಿಕಸನದ ಮೂಲಕ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ತಂದೆ ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ, ಗುರುಗಳಿಗೆ ಒಳ್ಳೆಯ ವಿದ್ಯಾರ್ಥಿಗಳಾಗಿ, ದೇಶಕ್ಕೆ ಒಳ್ಳೆಯ ಪ್ರಜೆಗಳಾಗಿ ದೇಶದ ಬೆಳವಣೆಗೆಗೆ ಶ್ರಮಿಸಬೇಕು ಎಂದು ಬಾಗಲಕೋಟೆ...

ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲ ವಿತರಣೆ

ಮೂಡಲಗಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಮಹಾಸಭಾದ 14ನೇ ವರ್ಷಾಚರಣೆಯ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯಿಂದ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ರೋಗಿಗಳಿಗೆ ಹಣ್ಣು-ಹಂಪಲ ವಿತರಿಸಿ ಸಂಸ್ಥಾಪನಾ ದಿನ ಆಚರಿಸಿದರು.ಈ ಸಮಯದಲ್ಲಿ ಮೂಡಲಗಿ ತಾಲೂಕಾ...

ಮನಸ್ಸು ಯಾವಾಗಲೂ ಚಟುವಟಿಕೆಯಿಂದ ಕೂಡಿರಬೇಕು-ಡಾ.ಭೇರ್ಯ ರಾಮಕುಮಾರ್

ಮನುಷ್ಯ ಯಾವಾಗಲೂ ಚಟುವಟಿಕೆಯಿಂದ ಬದುಕಬೇಕು. ಸೋಮಾರಿ ಮನಸ್ಸು ವಿವಿಧ ಕೆಟ್ಟ ಆಲೋಚನೆಗಳ ಬೀಡಾಗುತ್ತದೆ.ಆದ್ದರಿಂದ ಮಹಿಳೆಯರು ಕ್ರೀಡೆ,ಸಂಗೀತ, ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.ಅದರಿಂದ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅಭಿಪ್ರಾಯಪಟ್ಟರು.ಕೆ.‌ಆರ್.ನಗರದ ಸ್ಮಾರ್ಟ್ ಲೇಡೀಸ್ ಕ್ಲಬ್ ವತಿಯಿಂದ ಅಂತರರಾಷ್ಟ್ರೀಯ...

ಸೌಹಾರ್ದ ಸಭೆ ನಡೆಸಿ ದೇಶಕ್ಕೆ ಒಳ್ಳೆಯ ಸಂದೇಶ ರವಾನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು

ಬೀದರ - ಇಡೀ ದೇಶದಲ್ಲಿ ಹಿಜಾಬ್ ಕಿಚ್ಚು ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಬಸವಣ್ಣನವರ ಕರ್ಮಭೂಮಿ ಬೀದರ್ ನಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಕಿಶೋರ್ ಬಾಬು ಸೌಹಾರ್ದ ಸಭೆ ನಡೆಸಿ ಇಡೀ ರಾಜ್ಯ ಮತ್ತು ದೇಶಕ್ಕೆ ಒಂದು ಒಳ್ಳೆಯ ಸಂದೇಶ ಕಳಿಸಿದರು.ಬೀದರ್ ಜಿಲ್ಲೆಯು ಬಸವಣ್ಣನವರು ನಡೆದಾಡಿದ ಭೂಮಿ ಇರುವುದರಿಂದ ಬೀದರ್ ನಲ್ಲಿ ಎಲ್ಲಾ ಸಮಾಜದ ಮುಖಂಡರು ಸೇರಿ...

ಪೊಲೀಸ್ ಇಲಾಖೆ ಮೇಲೆ ಗುಡುಗಿದ ಹುಮನಾಬಾದ ಕಾಂಗ್ರೆಸ್ ಶಾಸಕ ರಾಜಶೇಖರ ಪಾಟೀಲ

ಬೀದರ - ಬೀದರ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ಪೊಲೀಸ್ ಅಧಿಕಾರಿಗಳ ವಿರುದ್ಧ ಶಾಸಕ ರಾಜಶೇಖರ ಬಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.ಬೀದರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿ ಕುರಿತಂತೆ ಅಸಮಾಧಾನ ಹೊರಹಾಕಿದ ಶಾಸಕರು, ಕೊಲೆ, ದರೋಡೆ, ಕಳ್ಳತನ, ಜೂಜು, ಇಸ್ಪೀಟು, ಮಟಕಾ, ಸೇರಿದಂತೆ ನಿಷೇಧಿತ...

ಖ್ಯಾತ ಮಹಿಳಾ ಸಾಹಿತಿ ವೈದೇಹಿ ಅವರ ಜನ್ಮ ದಿನ

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ 'ಜಾನಕಿ ಶ್ರೀನಿವಾಸಮೂರ್ತಿ'ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. 'ವಾಸಂತಿ' ಎಂಬುದು ಇವರ ಮೂಲ ಹೆಸರು. ಸಾಹಿತ್ಯಕ್ಕಾಗಿ ಹಲವು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಕ್ರೌಂಚ ಪಕ್ಷಿಗಳು ಎಂಬ ಕಥಾಸಂಕಲನಕ್ಕೆ ೨೦೦೯ರಲ್ಲಿ ಕೇಂದ್ರ ಸಾಹಿತ್ಯ...

ಇಂದಿನ ರಾಶಿ ಭವಿಷ್ಯ ಶನಿವಾರ (12-02-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ. ನಿಮ್ಮನ್ನು ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ಸಂಧಿಸುತ್ತೀರಿ. ವೃಷಭ ರಾಶಿ: ಇಂದು ಸಾಲಗಾರನು ನಿಮಗೆ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group