spot_img
spot_img

ಪೃಥ್ವಿ ಫೌಂಡೇಶನ್ ವತಿಯಿಂದ ‘ಜನಪದಸಿರಿ’ ಹಾಗೂ ‘ಪ್ರಶಸ್ತಿ ಪ್ರದಾನ ಸಮಾರಂಭ’

Must Read

spot_img
- Advertisement -

ಬೆಳಗಾವಿ – ಬುಧವಾರ ದಿ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯ ‘ಪೃಥ್ವಿ ಫೌಂಡೇಶನ್ ‘ರವರ ವತಿಯಿಂದ ‘ಜನಪದಸಿರಿ’ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೊನೋಳ್ಳಿ ವಹಿಸಲಿದ್ದು,ಸಾಹಿತಿ ಡಾ. ಪಿ. ಜಿ.ಕೆಂಪನ್ನವರ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಫೌಂಡೇಶನ್ನಿನ ಸದಸ್ಯರಿಂದ ಜಾನಪದ ಹಾಡುಗಳು, ಜನಪದ ಕಲೆಯನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳು ಮತ್ತು ಬೆಳಗಾವಿಯ ‘ಪುಷ್ಕಲ ನೃತ್ಯಾಲಯ’ ತಂಡದವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ‘ಅನುಪಮ ಸೇವಾ ರತ್ನ’ ಪ್ರಶಸ್ತಿಯನ್ನು ವಿದ್ಯಾ ಹುಂಡೆಕಾರ ಮತ್ತು ಪ್ರೇಮಾ ಪಾನಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ಜನಪದ ಆಸಕ್ತರು ಸಾಹಿತ್ಯ ಪ್ರೇಮಿಗಳು ಆಗಮಿಸಲಿದ್ದಾರೆ ಎಂದು ಕಾರ್ಯದರ್ಶಿ ಶೈಲಜಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಬಸವ ಜಯಂತಿ ಆಚರಣೆಗೆ ಹರ್ಡೇಕರ್ ಮಂಜಪ್ಪನವರೆ ಮೂಲ ಕಾರಣಕರ್ತರು – ಪ್ರೊ. ಶ್ರೀಕಾಂತ್ ಶಾನವಾಡ.

ಬೆಳಗಾವಿ - ಇದೇ ಫೆ. ೨೩  ರಂದು ಬೆಳಗಾವಿಯ ಮಹಾಂತೇಶ ನಗರದ ಹಳಕಟ್ಟಿ ಭವನದಲ್ಲಿ ವಚನ ಪ್ರಾರ್ಥನೆ ಮತ್ತು ಉಪನ್ಯಾಸ ಕಾರ್ಯಕ್ರಮ ನೆರವೇರಿತು. ಹರ್ಡೇಕರ್ ಮಂಜಪ್ಪನವರ ಬದುಕು...
- Advertisement -

More Articles Like This

- Advertisement -
close
error: Content is protected !!
Join WhatsApp Group