ಕರುನಾಡು ಸಾಧಕರು ಪ್ರಶಸ್ತಿ ಪ್ರದಾನ

Must Read

ಬೆಂಗಳೂರು: ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿ ಹಾಗೂ ಕಲಾಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕರುನಾಡು ಸಾಧಕರು ಪ್ರಶಸ್ತಿಯನ್ನು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಎಪ್ರಿಲ್ ೨೦ ರ ಬುಧವಾರ ಬೆಂಗಳೂರು ನಗರದ ಅರಮನೆಯ ಮೈದಾನದ ಮುಂಭಾಗ ಇರುವ ವೀರಶೈವ ಭವನದಲ್ಲಿ ಪ್ರದಾನ ಮಾಡಲಾಯಿತು.

ಈ ಸಮಯದಲ್ಲಿ ಸುಕ್ಷೇತ್ರ ಕೂಲಹಳ್ಳಿ ಶ್ರೀ ಶ್ರೀ ಪಟ್ಟದ ಚಿನ್ಮಯ ಮಹಾಸ್ವಾಮಿಗಳು, ಬಿಗ್ ಬಾಸ್ ಖ್ಯಾತಿಯ ಸೋನು ಪಾಟೀಲ,ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಡಾ.ಬಿ.ಎನ್.ಹೊರಪೇಟೆ,ಮಿಸ್ ಸೌಥ ವರ್ಡ ವಿಜೇತರಾದ ಡಾ.ಶಿಲ್ಪಾ ಸುಧಾಕರ, ಚಲನಚಿತ್ರ ನಟಿ ಮಾಲತಿ ಶ್ರೀ ಮೈಸೂರು, ವಕೀಲರಾದ ಕೆ.ಎಸ್.ಕೊಡಗೇರಿ, ಪತ್ರಕರ್ತರಾದ ಹನುಮಂತ ಹಳ್ಳಿಕೇರಿ ಸೇರಿದಂತೆ ಅನೇಕರು ಹಾಜರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group