- Advertisement -
ಮೂಡಲಗಿ: ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಮಂಗಳವಾರ ಸಡಗರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಲಾಗುವುದು ಎಂದು ಬಸವೇಶ್ವರ ಕಲ್ಯಾಣ ಮಂಟಪ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್ ಜಿ ಢವಳೇಶ್ವರ ಹೇಳಿದ್ದಾರೆ.
ಬೆಳಿಗ್ಗೆ ಬಸವೇಶ್ವರ ಮಂದಿರದಲ್ಲಿ ರುದ್ರಾಭಿಷೇಕ ಹಾಗೂ ಸಾಯಂಕಾಲ 3 ಗಂಟೆಗೆ ಬಸವಣ್ಣನವರ ಭಾವಚಿತ್ರದೊಂದಿಗೆ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಎತ್ತುಗಳ ಮೆರವಣಿಗೆಯು ಸಕಲ ವಾದ್ಯಮೇಳದೊಂದಿಗೆ ನೆರವೇರುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.