Homeಸುದ್ದಿಗಳುಬೆಳ್ಳಾರಿ ಬಿಜೆಪಿ ಯುವ ಮುಖಂಡ ಹತ್ಯೆ ಪ್ರಕರಣ

ಬೆಳ್ಳಾರಿ ಬಿಜೆಪಿ ಯುವ ಮುಖಂಡ ಹತ್ಯೆ ಪ್ರಕರಣ

ಗಡಿ ಜಿಲ್ಲೆ ಬೀದರ್ ನಲ್ಲೂ ಆರಂಭವಾದ ರಾಜೀನಾಮೆ ಪರ್ವ.

ಬೀದರ – ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿರುವುದಕ್ಕೆ ಪ್ರತಿಭಟನಾರ್ಥವಾಗಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಸಹ ಸಂಚಾಲಕ ರಾಜೀನಾಮೆ ನೀಡಿದ್ದಾರೆ.

ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಸ್ಥಾನಕ್ಕೆ ದಿನೇಶ್ ಮೂಲಗೆ ರಾಜೀನಾಮೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ್ ಮಂಠಾಳಕರ್ ಗೆ ಸಲ್ಲಿಸಿದರು.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಿಂದ ನನಗೆ ಬಹಳ ನೋವಾಗಿದೆ. ಇಂದು ನಮ್ಮದೆ ಸರ್ಕಾರವಿದ್ದರೂ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವಾಗಿದೆ.

ಹೀಗಾಗೀ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

error: Content is protected !!
Join WhatsApp Group