Homeಸುದ್ದಿಗಳುಬಿಜೆಪಿ ಭೀಷ್ಮನಿಗೆ ಭಾರತ ರತ್ನ ; ಸಂಸದ ಈರಣ್ಣ ಕಡಾಡಿ ಪ್ರಶಂಸೆ

ಬಿಜೆಪಿ ಭೀಷ್ಮನಿಗೆ ಭಾರತ ರತ್ನ ; ಸಂಸದ ಈರಣ್ಣ ಕಡಾಡಿ ಪ್ರಶಂಸೆ

ಮೂಡಲಗಿ: ನಮ್ಮ ದೇಶ ಕಂಡ ಅಪರೂಪದ ರಾಜಕಾರಣಿ, ಬಿಜೆಪಿ ಭೀಷ್ಮ ಎಂದೇ ಖ್ಯಾತರಾದ  ಲಾಲ್‌ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಪ್ರಶಸ್ತಿಯನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ  ಅವರು ಸ್ವಾಗತಿಸಿ, ಅಡ್ವಾಣಿ ಅವರನ್ನು ಅಭಿನಂದಿಸಿದ್ದಾರೆ.

ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಯವರು ಈ ದೇಶದಲ್ಲಿ ಏಕತಾ ಯಾತ್ರೆಯ ಮೂಲಕ ದೇಶದ ಜನರನ್ನು ಒಂದುಗೂಡಿಸುವಂತ ಕೆಲಸಕ್ಕೆ ಅವರು ಬಹಳ ಅವಿರತವಾಗಿ ಶ್ರಮಿಸಿದ್ದರು. ಅದರ ಜೊತೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಲ್ಲಿ ಅಡ್ವಾಣಿಯವರ ಪಾತ್ರ ಮುಖ್ಯ ರಾಮ ರಥಯಾತ್ರೆ ಮೂಲಕ ಇಡೀ ದೇಶಾದ್ಯಂತ ಸಂಚರಿಸಿ ರಾಮಮಂದಿರ ಹೋರಾಟದ ಕಿಚ್ಚು ಹಚ್ಚಿದ್ದರು. ಅದು ಕೂಡ ಇವತ್ತು ಫಲಪ್ರದವಾಗಿದೆ.

ಕೇಂದ್ರ ಗೃಹ ಸಚಿವರಾಗಿ, ಉಪಪ್ರಧಾನಿಯಾಗಿ ಮತ್ತು ಮಾಹಿತಿ- ತಂತ್ರಜ್ಞಾನ ಸಚಿವರಾಗಿ ದೇಶಕ್ಕೆ ತನ್ನ ಸೇವೆಯನ್ನು ಸಲ್ಲಿಸಿದಂತಹ ವಯೋವೃದ್ದ, ಹಿರಿಯ ರಾಜಕಾರಿಣಿಯಾದ ಅಡ್ವಾನಿ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಕ್ಕಿರುವುದು ಅತ್ಯಂತ ಸಂತೋಷದ ಸಂಗತಿ ಜೊತೆಗೆ ಅಡ್ವಾಣಿ ಅವರಿಗೆ ಈ ಪ್ರಶಸ್ತಿ ನೀಡುವ ಮೂಲಕ ಭಾರತ ರತ್ನ ಪ್ರಶಸ್ತಿ ಗೌರವವೂ ಹೆಚ್ಚಾಗಿದೆ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಗೆ ಶುಭ ಕೋರಿದರು.

RELATED ARTICLES

Most Popular

error: Content is protected !!
Join WhatsApp Group