spot_img
spot_img

ಭಾರ್ಗವಿ ನಾರಾಯಣ್

Must Read

- Advertisement -

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಜನಪ್ರಿಯರಾಗಿದ್ದ ಖ್ಯಾತ ಹಿರಿಯ ನಟಿ ಭಾರ್ಗವಿ ನಾರಾಯಣ್ ಸೋಮವಾರ (ಫೆ.14) ರಾತ್ರಿ 7.30ಕ್ಕೆ ನಿಧನರಾಗಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಭಾರ್ಗವಿ ನಾರಾಯಣ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಆತ್ಮೀಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಭಾರ್ಗವಿ ಅವರದ್ದು ಕಲಾ ಕುಟುಂಬ:

ಸಿನಿಮಾ, ಕಿರುತೆರೆ ಜೊತೆಗೆ ರಂಗಭೂಮಿಯಲ್ಲೂ ಅಪಾರ ಅನುಭವ ಹೊಂದಿದ್ದ ಭಾರ್ಗವಿ ಅವರದ್ದು ಕಲಾ ಕುಟುಂಬ ಎಂದೇ ಹೇಳಬಹುದು. ಭಾರ್ಗವಿ ಅವರ ಪತಿ ನಾರಾಯಣ್ ಅವರನ್ನು ಮೇಕಪ್ ನಾಣಿ ಎಂದೇ ಕರೆಯಲಾಗುತ್ತಿತ್ತು. ಭಾರ್ಗವಿ ಅವರ ಪುತ್ರ ಪ್ರಕಾಶ್ ಬೆಳವಾಡಿ ಅವರದ್ದು ರಂಗಭೂಮಿಯಲ್ಲಿ ದೊಡ್ಡ ಹೆಸರು. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷೆಯಲ್ಲೂ ಅವರಿಗೆ ಬೇಡಿಕೆ ಇದೆ. ಭಾರ್ಗವಿ ಪುತ್ರಿ ಸುಧಾ ಬೆಳವಾಡಿ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಹಾಗೆಯೇ, ಭಾರ್ಗವಿ ಅವರ ಮೊಮ್ಮಗಳು, ಸುಧಾ ಬೆಳವಾಡಿ ಅವರ ಪುತ್ರಿ ಸಂಯುಕ್ತಾ ಹೊರನಾಡು ಕೂಡ ನಟಿಯಾಗಿ ಹೆಸರು ಮಾಡಿದ್ದಾರೆ. ಇದೀಗ ಭಾರ್ಗವಿ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಪ್ರಶಸ್ತಿ ಪುರಸ್ಕೃತ ನಟಿ ಭಾರ್ಗವಿ:

ಭಾರ್ಗವಿ ನಾರಾಯಣ್ ಅವರು 60ರ ದಶಕದಲ್ಲೇ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ‘ಪ್ರೊ. ಹುಚ್ಚುರಾಯ’ ಚಿತ್ರದಲ್ಲಿನ ಭಾರ್ಗವಿ ಅವರ ನಟನೆಗೆ 1974-75ರ ಸಾಲಿನ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. 1998ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಭಾರ್ಗವಿ ಅವರಿಗೆ ಲಭಿಸಿವೆ. 2012ರಲ್ಲಿ ಬಿಡುಗಡೆಯಾದ ‘ನಾನು, ಭಾರ್ಗವಿ’ ಎಂಬ ಅವರ ಆತ್ಮಕಥೆಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಂದಹಾಗೆ, ಪ್ರಕಾಶ್ ಬೆಳವಾಡಿ ನಿರ್ದೇಶನ ಮಾಡಿದ್ದ ‘ಸ್ಟಂಬಲ್’ (Stumble) ಅನ್ನೋ ಇಂಗ್ಲಿಷ್ ಸಿನಿಮಾದಲ್ಲಿ ಭಾರ್ಗವಿ ನಟಿಸಿದ್ದರು. ಅದರಲ್ಲಿ ಅನಂತ್ ನಾಗ್ ಮತ್ತು ಸುಹಾಸಿನಿ ಮುಖ್ಯಭೂಮಿಕೆಯಲ್ಲಿದ್ದರು. ‘ಮುಕ್ತ’ ಸೇರಿದಂತೆ ಹಲವು ಯಶಸ್ವಿ ಧಾರಾವಾಹಿಗಳಲ್ಲಿ ಭಾರ್ಗವಿ ನಟಿಸಿದ್ದರು
ಪ್ರಖ್ಯಾತ ರಂಗಭೂಮಿ ಹಿರಿಯ ಕಲಾವಿದೆ, ದೂರದರ್ಶನ ಧಾರವಾಹಿಗಳ ಮೌಲ್ಯಯುತ ಪಾತ್ರಗಳ ನಿರ್ವಹಣೆಯ ಅನುಭವಿಕ ಪಾತ್ರಧಾರಿ ಎಂದೇ ಪ್ರಸಿದ್ಧರಾಗಿರುವ ಭಾರ್ಗವಿ ನಾರಾಯಣ್ ಅವರು ಫೆಬ್ರುವರಿ 4, 1938ರ ವರ್ಷದಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ಡಾ. ಎಂ. ರಾಮಸ್ವಾಮಿ, ತಾಯಿ ನಾಮಗಿರಿಯಮ್ಮ. ಮಹಾರಾಣಿ ಕಾಲೇಜಿನಿಂದ ಬಿ.ಎಸ್ಸಿ. ಪದವಿ ಪಡೆದ ನಂತರದಲ್ಲಿ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿ ಪಡೆದ ಭಾರ್ಗವಿ ಅವರು ಇ.ಎಸ್.ಐ. ಕಾರ್ಪೊರೇಷನ್ನಿನಲ್ಲಿ ವ್ಯವಸ್ಥಾಪಕರ ಹುದ್ದೆ ನಿರ್ವಹಿಸಿ 1990ರಲ್ಲಿ ಸ್ವಯಂ ನಿವೃತ್ತಿ ಪಡೆದರು.

- Advertisement -

ಹೈಸ್ಕೂಲಿನಲ್ಲಿದ್ದಾಗಲೇ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸಿಕೊಂಡ ಭಾರ್ಗವಿಯವರು ಉಪಾಧ್ಯಾಯಿನಿಯಾಗಿದ್ದ ವಿಮಲಾರವರ ಪ್ರೋತ್ಸಾಹದಂತೆ ತಮ್ಮದೇ ಗುಂಪುಕಟ್ಟಿಕ್ಕೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಶಾಲಾ ಕಾಲೇಜುಗಳ ನಾಟಕಗಳಲ್ಲಿ ಭಾರ್ಗವಿಯವರು ಪ್ರಮುಖ ಪಾತ್ರವಹಿಸಿದ ನಾಟಕಕ್ಕೆ ಬಹುಮಾನ ಗ್ಯಾರಂಟಿ ಎಂಬ ಪ್ರತೀತಿಯಿತ್ತು. ಅವರು ರಾಜ್ಯ ನಾಟಕ ಸ್ಪರ್ಧೆಗಳಲ್ಲಿ ಎರಡುಬಾರಿ ‘ಉತ್ತಮ ನಟಿ’ ಪ್ರಶಸ್ತಿ ಗಳಿಸಿದರು. ರಾಜ್ಯಮಟ್ಟದ ಮಕ್ಕಳ ನಾಟಕ ಸ್ಪರ್ಧೆಗಾಗಿ ಅವರು ಬರೆದು ನಿರ್ದೇಶಿಸಿದ ಮಕ್ಕಳ ನಾಟಕ ‘ಭೂತಯ್ಯನ ಪೇಚಾಟ’ ನಾಟಕಕ್ಕೆ 1975ರಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಬಂತು.

ಭಾರ್ಗವಿ ನಾರಾಯಣ್ ಅವರು 1955ರಿಂದಲೂ ಆಕಾಶವಾಣಿಯ ಕಲಾವಿದೆಯಾಗಿ ಭಾಗವಹಿಸಿದ ನಾಟಕಗಳ ಜೊತೆಗೆ ಹಲವಾರು ನಾಟಕಗಳನ್ನೂ ಬರೆದು ನಿರ್ದೇಶಿಸಿದರು. ಪ್ರೊಫೆಸರ್ ಹುಚ್ಚೂರಾಯ ಚಲನ ಚಿತ್ರದಲ್ಲಿನ ನಟನೆಗಾಗಿ ಅವರಿಗೆ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿ ಸಂದಿತ್ತು. ಅವರು ಅನೇಕ ಚಲಚಿತ್ರಗಳಲ್ಲೂ ದೂರದರ್ಶನ ಧಾರಾವಾಹಿಗಳಲ್ಲೂ ಪಾತ್ರ ನಿರ್ವಹಿಸಿದ್ದಾರೆ. ಭಾರ್ಗವಿ ನಾರಾಯಣರು ಜಿ ಟಿ.ವಿ. ದೈನಿಕ ಧಾರಾವಾಹಿ ಋತುಮಾನಕ್ಕಾಗಿ ಚಿತ್ರಕಥೆ, ಸಂಭಾಷಣೆ ರಚಿಸಿರುವುದಲ್ಲದೆ, ಬಾಳೇ ಬಂಗಾರ ಕಾರ್ಯಕ್ರಮಕ್ಕೆ ಕ್ರಿಯಾಶೀಲ ಸಲಹೆ ಮಾರ್ಗದರ್ಶನಗಳನ್ನೂ ನೀಡಿದ್ದಾರೆ. ಉಳಿದಂತೆ ಕೂಡಾ ಅನೇಕ ಟಿ.ವಿ. ಧಾರವಾಹಿಗಳಿಗೂ ಚಿತ್ರಕತೆ, ಸಂಭಾಷಣೆ ರಚಿಸಿರುವ ಭಾರ್ಗವಿ ನಾರಾಯಣ್ ಅವರಿಗೆ , ‘ಕವಲೊಡೆದ ದಾರಿ’ ಧಾರಾವಾಹಿಗಾಗಿ ಮಂಗಳೂರಿನ ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಲಭಿಸಿತು.

ಭಾರ್ಗವಿ ನಾರಾಯಣ್ ಅವರಿಗೆ 1998ರಲ್ಲಿ ಕರ್ನಾಟಕ ನಾಟಕ ಅಕಾಡಮಿಯಿಂದ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ಎಂ. ಕೆ. ಇಂದಿರಾ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಸಂದಿವೆ. ನಾಟಕ ಅಕಾಡಮಿಯ ಸದಸ್ಯೆಯಾಗಿಯೂ ಸಹಾ ಅವರು ಸೇವೆ ಸಲ್ಲಿಸಿದ್ದಾರೆ.

- Advertisement -

ರಂಗಭೂಮಿಯಿಂದ ಪಡೆದ ಅನುಭವದಿಂದ ಅವಿಭಕ್ತ ಕುಟುಂಬವನ್ನು ಪ್ರೀತಿಸುವ, ಎಲ್ಲರೊಡನೆ ಬೆರೆತು ಸಂತೋಷಿಸುವ, ಇರದುದರೆಡೆಗೆ ಜೀವ ತುಯ್ಯದೆ, ಇರುವುದರೆಡೆಗೆ ಸಂತೃಪ್ತ ಭಾವ ತಾಳುವ ತೃಪ್ತ ಕಲಾವಿದೆ ಭಾರ್ಗವಿ ನಾರಾಯಣ್. ರಂಗಭೂಮಿಯಲ್ಲಿ ಮೇಕಪ್ ನಾಣಿ ಎಂದೇ ಪ್ರಸಿದ್ಧರಾಗಿದ್ದ ಬಿ.ಎನ್. ನಾರಾಯಣ್ ಅವರ ಪತಿ. ಅವರ ಮಕ್ಕಳಾದ ಸುಧಾ ಬೆಳವಾಡಿ ಮತ್ತು ಪ್ರಕಾಶ್ ಬೆಳವಾಡಿ ಸಹಾ ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಗಳಲ್ಲಿ ಮಹತ್ಸಾಧನೆ ಮಾಡಿದ್ದಾರೆ.

‘ನಾನು ಭಾರ್ಗವಿ’ ಎಂಬುದು ಭಾರ್ಗವಿ ನಾರಾಯಣ್ ಅವರ ಆತ್ಮಕಥನ. ಈ ಕೃತಿಗಾಗಿ ಅವರಿಗೆ ಎಂ. ಕೆ. ಇಂದಿರಾ ಪ್ರಶಸ್ತಿ ಲಭಿಸಿದೆ.

ನಾಡಿನ ಹಿರಿಯ ಕಲಾವಿದರಾದ ಭಾರ್ಗವಿ ನಾರಾಯಣ್ ಅವರಿಗೆ ಭಾವಪೂರ್ಣ ಶೃದ್ದಾಂಜಲಿ ಹಾಗೂ ನುಡಿ ನಮನ.


ಪ್ರಶಾಂತ್ ಕುಮಾರ್ ಶೆಟ್ಟಿ

- Advertisement -
- Advertisement -

Latest News

ಕಾರ್ಯಕರ್ತರೇ, ನಾಯಕರ ದಾಳಗಳಾಗದೆ ಜಾಗೃತರಾಗಿರಿ.

ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಎಚ್ಚರಿಕೆ.ಕಾರ್ಯಕರ್ತರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಸಲಹೆ. ನಿಮ್ಮನ್ನ ರಾಜ್ಯ ಸರ್ಕಾರ ತಮ್ಮದಿದೆ ಆದ್ದರಿಂದ ನಿಮಗೆ ರಕ್ಷಣೆ ನೀಡುತ್ತದೆ ಏನೂ...
- Advertisement -

More Articles Like This

- Advertisement -
close
error: Content is protected !!
Join WhatsApp Group