ಬೀದರ – ಇತ್ತೀಚೆಗೆ ಟ್ರಕ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ದುರ್ಮರಣ ಹೊಂದಿದ ೭ ಜನ ಮಹಿಳಾ ಕಾರ್ಮಿಕರ ಕುಟುಂಬದವರಿಗೆ ತಲಾ ೫ ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ಬೀದರ್ ಬ್ರೀಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳಿಗೆ ಸಾಂತ್ವನ ಹೇಳಿದ ಉಸ್ತುವಾರಿ ಸಚಿವರು ಮೃತರಿಗೆ ತಲಾ ೫ ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.
ಅಪಘಾತ ಸಂಭವಿಸಿದ್ದು ತುಂಬಾ ಖೇದಕರ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸುತ್ತದೆ. ಸಿಎಂ ಜೊತೆ ಮಾತನಾಡಿ ಗಾಯಾಳುಗಳಿಗೂ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಮುನೇನಕೊಪ್ಪ ಹೇಳಿದರು.
ವರದಿ: ನಂದಕುಮಾರ ಕರಂಜೆ, ಬೀದರ