Bidar: ಗೋ ಹತ್ಯೆ ತಡೆದ ಶಾಸಕರ ವಿರುದ್ಧ ಎಫ್ಆಯ್ಆರ್ !

Must Read

ಬೀದರ – ಗೋ ಹತ್ಯೆ ನಡೆಯುತ್ತಿದ್ದ ಮನೆಯ ಮೇಲೆ ಶಾಸಕರು ಮತ್ತು ಅವರ ಬೆಂಬಲಿಗರು ದಾಳಿ ಪ್ರಕರಣ ಸಂಬಂಧ ಶಾಸಕ ಶರಣು ಸಲಗರ್ ಸೇರಿ 9 ಜನರ ಮೇಲೆ ಎಫ್ ಆಯ್ಆರ್ ದಾಖಲಾಗಿದೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜುಲೈ 1 ರಂದು ಬಸವಕಲ್ಯಾಣ ಪಟ್ಟಣದ ಹಿರೇಮಠ ಕಾಲೋನಿಯಲ್ಲಿ ಇನಾಮುಲ್ಲಾ ಖಾನ್ ಎಂಬುವವರ ಮನೆಯಲ್ಲಿ ಗೋ ಹತ್ಯೆ ನಡೆಯುತ್ತಿತ್ತು. ಗೋ ಹತ್ಯೆ ನಡೆಯುತ್ತಿದ್ದ ಮನೆಯ ಮೇಲೆ ಶಾಸಕ ಶರಣು ಸಲಗರ್ ಹಾಗೂ ಅವರ ಬೆಂಬಲಿಗರು ದಾಳಿ ಮಾಡಿ ಗೋ ಹತ್ಯೆ ತಡೆದಿದ್ದರು.

ಐದು ದಿನದ ಬಳಿಕ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶಾಸಕ ಶರಣು ಸಲಗರ್ ಸೇರಿ 9 ಜನ ಬೆಂಬಲಿಗರ ಮೇಲೆ ಎಫ್ ಐಆರ್ ದಾಖಲು ಮಾಡಿಕೊಂಡು ಪೊಲೀಸರು ವಿಚಾರಣೆ ನಡೆಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಪ್ರೀತಿಸಿದ ತಪ್ಪಿಗೆ

ಪ್ರೀತಿಸಿದ ತಪ್ಪಿಗೆ... ಇಂದು ಈ ಮುಸ್ಸಂಜೆಯಲಿ.... ಯಾರೋ ಎಲ್ಲೋ ಪ್ರೀತಿಸುವ ಹೃದಯಕೆ ನೋವುಣಿಸಿರಬೇಕು... ಅಕಾಲದಲ್ಲಿ ಆಕಾಶ ಆರ್ಭಟಿಸಿ ಭೋರ್ಗರೆದು ಹೀಗೆ ಸುರಿಯಬೇಕಾದರೆ... ಸದ್ದಿಲ್ಲದೇ ಒಡೆದ ಎದೆ ತುಣುಕುಗಳು ಮುಗಿಲಲಿ ಶೋಕಗೀತೆ ನುಡಿಸುತಿವೆ....ಯಾರೋ ಎಲ್ಲೋ ಹೂವಂತ ಮನಸನು ಮಾತಿನ ಮುಳ್ಳುಗಳಿಂದ ಚುಚ್ಚಿ ನೋಯಿಸಿರಬೇಕು... ಹೆಪ್ಪುಗಟ್ಟಿದ ದುಃಖ ಕಪ್ಪು ಮೋಡದ ಒಡಲ ಬಗೆದು...

More Articles Like This

error: Content is protected !!
Join WhatsApp Group