Bidar News: ಪ್ರೇಮ ಪ್ರಕರಣ; ಯುವಕನ ಕೊಲೆ

Must Read

ಬೀದರ – ಸಹೋದರಿಯನ್ನು ಪ್ರೀತಿಸಿದ ಯುವಕನೊಬ್ಬನನ್ನು ಹುಡುಗಿಯ ಸಹೋದರರು ಭೀಕರವಾಗಿ ಕೊಲೆ ಮಾಡಿ ಬಿಸಾಕಿರುವ ಘಟನೆ ತಾಲೂಕಿನ ಖೇಣಿರಂಜೋಳ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಕೊಲೆಯಾಗುವ ಮುನ್ನ ಯುವಕ ತನ್ನ ಸ್ನೇಹಿತನಿಗೆ ಕರೆ ಮಾಡಿದ್ದು ತನ್ನನ್ನು ಕೈಕಾಲು ಕಟ್ಟಿ ಕಾರಂಜಾ ನದಿಯಲ್ಲಿ ಬಿಸಾಕುವ ಯೋಜನೆಯನ್ನು ಕೊಲೆಗಾರರು ಮಾಡಿದ್ದರ ಬಗ್ಗೆ ಹೇಳಿಕೊಂಡಿದ್ದಾನೆ. ತನಗೆ ಒಂದು ಚಾನ್ಸ್ ಕೊಡಿ ಎಂದು ಕೇಳಿಕೊಂಡರೂ ಅವರು ಒಪ್ಪಲಿಲ್ಲ. ತನ್ನ ಕೈಕಾಲು ಸಂಪೂರ್ಣ ಮುರಿದುಹಾಕಿದ್ದಾರೆ. ಈಗ ಸದ್ಯಕ್ಕೆ ನದಿಯಲ್ಲಿ ಬಿಸಾಡಲು ಸಿದ್ಧರಾಗಿರುವುದಾಗಿ ಹೇಳಿ, ಅದನ್ನು ರೆಕಾರ್ಡ್ ಮಾಡಲು ಕೂಡ ಹೇಳಿರುವ ಆಡಿಯೋ ಟೈಮ್ಸ್ ಗೆ ಲಭ್ಯವಾಗಿದೆ.

ಕಣಜಿ ಗ್ರಾಮದ ಆನಂದ (೨೫) ಎಂಬ ಯುವಕನೇ ಕೊಲೆಯಾದ ದುರ್ದೈವಿ. ಯುವತಿಯ ಸಹೋದರರಾದ ಓಮೇಶ ಹಾಗೂ ದೇವಧೂಳಪ್ಪ ಎಂಬುವವರು ಸೇರಿ ಯುವಕನ ಕೈಕಾಲು ಮುರಿದು, ತಲೆಗೆ ಹೊಡೆದು ಕಟ್ಟಿ ಕಾರಂಜಾ ನದಿಗೆ ಬಿಸಾಕಿದ್ದಾರೆನ್ನಲಾಗಿದ್ದು ಪ್ರಕರಣದ ತನಿಖೆ ನಡೆದಿದೆ.

ವರದಿ : ನಂದಕುಮಾರ್ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group