ಹಾಲಿ ಹಾಗೂ ಮಾಜಿ ಸಿಎಂಗಳ ಬೀದರ್ ಪ್ರವಾಸ

Must Read

ಶನಿವಾರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ಬೀದರ್ ಪ್ರವಾಸ ಕೈಗೊಂಡಿದ್ದು ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ

ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬೀದರ್ ಏರಬೇಸ್ ಗೆ ಬರಲಿರುವ ಸಿಎಂ‌ ಬಳಿಕ ಏರಬೇಸ್ ನಿಂದ ಹೆಲಿಕಾಪ್ಟರ್ ಮೂಲಕ ಬಿಕೆಡಿಬಿ ಮೈದಾನಕ್ಕೆ ಆಗಮಿಸುವರು.

ಮಂಡಳಿ ಸಭಾ ಭವನದಲ್ಲಿ ನಡೆಯಲಿರುವ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಅವರು ಭಾಗಿಯಾಗಿ ಬಳಿಕ ಬಸವಕಲ್ಯಾಣವನ್ನು ಸುಂದರ ನಗರವನ್ನಾಗಿಸುವ ವಿವಿಧ ಯೋಜನೆಗಳ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅನಂತರ ಡಾ. ಬಿಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡುವರು.

ಬಸವಕಲ್ಯಾಣದ ಥೇರು ಮೈದಾನದಲ್ಲಿ ಈ ಎಲ್ಲ ಕಾರ್ಯಕ್ರಮಗಳು ನಡೆಯಲಿವೆ.

ಸಂಜೆ ಬೀದರ್ ನಿಂದ ವಿಶೇಷ ವಿಮಾನದ ಮೂಲಕ ಸಿಎಂ ಹಾಗೂ ಮಾಜಿ ಸಿಎಂ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

ಕೇಂದ್ರ ಸಚಿವ ಭಗವಂತ್ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮನೇನಕೊಪ್ಪ ಸಚಿವ ಪ್ರಭು ಚವ್ಹಾಣ್, ಶಾಸಕರು, ಅಧಿಕಾರಿಗಳು, ಸ್ವಾಮೀಜಿಗಳು ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಜೊತೆ ಭಾಗವಹಿಸಲಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group