- Advertisement -
ಬೀದರ – ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ ಮೂರ್ಛೆ ಹೋಗಿ ನಂತರ ಅದೇ ವ್ಯಕ್ತಿಯ ಮೇಲೆ ಕಾರು ಹರಿದು ಹೋಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ.
ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ದೃಶ್ಯ ಹಾಗೂ ಕಾರು ಹರಿದು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ನಾಗನಾಥ ಕಾರಬರಿ (50) ಮೃತಪಟ್ಟವರು.