ಸವದತ್ತಿ: ಸವದತ್ತಿ ಯ ಶಾಂತಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನ ಆಚರಿಸಲಾಯಿತು. ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಶಿಕ್ಷಕರಾದ ತಮ್ಮನಗೌಡ ಏಗನಗೌಡ್ರ ” ಕುವೆಂಪುರವರು ವಿಶ್ವದ ಜನತೆಗೆ ತಮ್ಮ ಸಾಹಿತ್ಯದ ಮೂಲಕ ವಿಶ್ವಮಾನವ ಸಂದೇಶ ಸಾರಿದ್ದಾರೆ. ಮನುಜಮತ ವಿಶ್ವಪಥ ಎಂಬ ಸಾಲುಗಳ ಮೂಲಕ ಸರ್ವಧರ್ಮ ಸಮನ್ವಯತೆಯಿಂದ ಬದುಕಲು ತಿಳಿಸಿದ್ದಾರೆ. ಅವರೆಂದಿಗೂ ಅಜರಾಮರ”ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ನೀಲಮ್ಮ ಚಂದಾಪುರ, ಪಾರ್ವತಿ ಪಚ್ಚೇದ, ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ಹಾಜರಿದ್ದರು. ಮಕ್ಕಳಿಗೆ ಸಿಹಿ ನೀಡಲಾಯಿತು.
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...

