- Advertisement -
ಸವದತ್ತಿ: ಸವದತ್ತಿ ಯ ಶಾಂತಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನ ಆಚರಿಸಲಾಯಿತು. ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಶಿಕ್ಷಕರಾದ ತಮ್ಮನಗೌಡ ಏಗನಗೌಡ್ರ ” ಕುವೆಂಪುರವರು ವಿಶ್ವದ ಜನತೆಗೆ ತಮ್ಮ ಸಾಹಿತ್ಯದ ಮೂಲಕ ವಿಶ್ವಮಾನವ ಸಂದೇಶ ಸಾರಿದ್ದಾರೆ. ಮನುಜಮತ ವಿಶ್ವಪಥ ಎಂಬ ಸಾಲುಗಳ ಮೂಲಕ ಸರ್ವಧರ್ಮ ಸಮನ್ವಯತೆಯಿಂದ ಬದುಕಲು ತಿಳಿಸಿದ್ದಾರೆ. ಅವರೆಂದಿಗೂ ಅಜರಾಮರ”ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ನೀಲಮ್ಮ ಚಂದಾಪುರ, ಪಾರ್ವತಿ ಪಚ್ಚೇದ, ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ಹಾಜರಿದ್ದರು. ಮಕ್ಕಳಿಗೆ ಸಿಹಿ ನೀಡಲಾಯಿತು.