ಪಂಚರಾಜ್ಯಗಳಲ್ಲಿ ಬಿಜೆಪಿಗೆ ಮೇಲುಗೈ – ಬಿಎಸ್ ವೈ

Must Read

ಬೀದರ – ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಆಯ್ಕೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಬೀದರ್ ಏರ್ಪೋರ್ಟ್ ನಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ಹೋದ ಕಡೆಗಳಲ್ಲಿ ಜನತೆಯ ಪ್ರತಿಕ್ರಿಯೆ ಚೆನ್ನಾಗಿದೆ, ಇನ್ನೂ ಸ್ವಲ್ಪ ಪ್ರಯತ್ನ ಮಾಡಿದರೆ ಒಳ್ಳೆಯ ರಿಜಲ್ಟ್ ಬರಲಿದೆ ಎಂದರು.

ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪ್ರಮುಖರು ಬರುತ್ತಿದ್ದಾರೆ. ಎಲ್ಲರೂ ವಿಶೇಷವಾದ ಗಮನ ಕೊಡುತ್ತಿದ್ದಾರೆ, ಎಲ್ಲರೂ ಸೇರಿಕೊಂಡು ಒಳ್ಳೆಯ ಕೆಲಸ ಮಾಡಬೇಕೆಂದುಕೊಂಡಿದ್ದಾರೆ

ನಾನು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ ಎಂದರು.

ಕಾಂಗ್ರೆಸ್ ಸರ್ಕಾರದಿಂದ ಜಾತಿ ಜನಗಣತಿ ವಿಚಾರ ಮಾತನಾಡಿದ ಯಡಿಯೂರಪ್ಪ, 

ನೋಡೋಣ ಸರ್ಕಾರ ಏನ್ ತೀರ್ಮಾನ ತೆಗೆದುಕೊಳ್ಳುತ್ತದೆ ಅಂತ. ನಾವು ಜನ ಏನು ಹೇಳುತ್ತಾರೊ, ಜನರ ಅಭಿಪ್ರಾಯ ತಿಳಿದುಕೊಂಡು ತೀರ್ಮಾನ ಮಾಡುತ್ತೇವೆ. ವರದಿಗೆ ಲಿಂಗಾಯತರು, ಒಕ್ಕಲಿಗರು ವಿರೋಧ ಮಾಡುತ್ತಿದ್ದಾರೆ ಎಂದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group