ಮೂಡಲಗಿ: ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯುಥ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು ಹಾಗೂ ರೋಟರಿ ರಕ್ತ ಭಂಡಾರ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜನ್ಮ ಜಯಂತಿ ಹಾಗೂ ರಾಷ್ಟೀಯ ಯುವ ದಿನದ ಅಂಗವಾಗಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಶುಕ್ರವಾರ ದಿನಾಂಕ 12-01-2024 ರಂದು ಬೆಳಿಗ್ಗೆ 9.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಬಂದು ರಕ್ತದಾನ ಮಾಡಬೇಕೆಂದು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರೊ. ಶಂಕರ ನಿಂಗನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9742054268 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು ತಿಳಿಸಿದ್ದಾರೆ.