- Advertisement -
ಸಿಂದಗಿ: ಶ್ರೀ ಬಿ.ಎಮ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಬಿಜಾಪುರ ಹಾಗೂ ಸರ್ಕಾರಿ ಆಸ್ಪತ್ರೆ ಸಿಂದಗಿ ಇವರ ಸಹಯೋಗದಲ್ಲಿ ಶ್ರೀ ಬಿ.ಎಂ. ಪಾಟೀಲ ಅವರ 31ನೇ ಪುಣ್ಯಸ್ಮರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ಹೃದ್ರೋಗ, ನರರೋಗ ಹಾಗೂ ಕರುಳು ಸಂಬಂಧಿ ರೋಗಗಳ ತಪಾಸಣೆಯನ್ನು ಜು.27 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಸಿಂದಗಿ ಸರ್ಕಾರಿ ತಾಲೂಕಾ ಆಸ್ಪತ್ರೆಯಲ್ಲಿ ನಡೆಯಲಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಬಿಎಲ್ಡಿಇ ಆಸ್ಪತ್ರೆಯ ಆಡಳಿತ ಮಂಡಳಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಡಾ. ಪ್ರಶಾಂತ ಬಮ್ಮಣ್ಣಿ ಹಾಗೂ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಶಿವು.ಎಸ್.ಹತ್ತಿ ಇವರ ಸಮ್ಮುಖದಲ್ಲಿ ಕರಪತ್ರಗಳನ್ನು ಹಚ್ಚುವ ಮೂಲಕ ಸಂದೇಶ ರವಾನಿಸಿ ಕರೆ ನೀಡಿದರು.