“ಹೂ ಮುಡಿದ ಜಡೆ ” ಕೃತಿ ಲೋಕಾರ್ಪಣೆ

Must Read

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಇವರಿಂದ ಪ್ರತೀ ವರ್ಷದಂತೆ ನಡೆಯುವ ೪ ನೇ ಕನ್ನಡ ನುಡಿವೈಭವ ಕಾರ್ಯಕ್ರಮದಲ್ಲಿ ಮಧುನಾಯ್ಕ ಲಂಬಾಣಿ ಸಂಪಾದಕತ್ವದ ಕೃತಿ “ಹೂ ಮುಡಿದ ಜಡೆ”ಯ ಬಿಡುಗಡೆಗೆ ಕರ್ನಾಟಕ ಬಂಜಾರ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ.ಎ ಆರ್ ಗೋವಿಂದಸ್ವಾಮಿಯವರು ಆಗಮಿಸಲಿದ್ದಾರೆ.

ಇವರು ಚಲನ ಚಿತ್ರ ನಟರು, ನಿರ್ದೇಶಕರು, ಸಾಹಿತಿಗಳು ಖ್ಯಾತ ರಂಗಭೂಮಿ ಕಲಾವಿದರು ಆಗಿದ್ದು ಅನೇಕ ಪ್ರಮುಖ ಕೃತಿಗಳನ್ನು ರಚಿಸಿ ನಾಡು ನುಡಿಯ ಸೇವೆ ಮಾಡಿದ್ದಾರೆ. ಹೂ ಮುಡಿದ ಜಡೆ ಕೃತಿ ಲೋಕಾರ್ಪಣೆಗೆ ದಿನಾಂಕ-೨೫.೦೮.೨೦೨೪ ಭಾನುವಾರ ದಾವಣಗೆರೆಯಲ್ಲಿ ನಡೆಯುವ ೪ ನೇ ಕನ್ನಡ ನುಡಿವೈಭವ ಕಾರ್ಯಕ್ರಮಕ್ಕೆ ಆಗಮಿಸಿ ಪುಸ್ತಕ ಬಿಡುಗಡೆ ಮಾಡುವರು ಎಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಧುನಾಯ್ಕ ಲಂಬಾಣಿಯವರು ತಿಳಿಸಿದ್ದಾರೆ.

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group