ಬೆಂಗಳೂರು – ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಶುಕ್ರವಾರ ಬೆಳಿಗ್ಗೆ ಮಾಡಿಕೊಂಡಿದ್ದಾರೆ.
ವೈದ್ಯರಾಗಿದ್ದ ಸೌಂದರ್ಯ ಅವರು ಪತಿ ಮತ್ತು ಒಂಬತ್ತು ತಿಂಗಳ ಮಗುವನ್ನು ಅಗಲಿದ್ದು ಅವರು ಖಿನ್ನತೆಯಿಂದ ಬಳಲುತ್ತಿದ್ದರೆಂಬುದಾಗಿ ಹೇಳಲಾಗುತ್ತಿದೆ ಆದರೂ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸೋಮನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಸೌಂದರ್ಯ ಅವರ ಅಂತಿಮ ಸಂಸ್ಕಾರ ನಡೆಸಲಾಯಿತು.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.