ಸುದ್ದಿಗಳು

ಅಕ್ರಮ ಗುಟ್ಕಾ ದಂಧೆಯಲ್ಲಿ ರಾಜಕಾರಣಿಗಳು?

ಬೀದರ - ಜಿಲ್ಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇದು. ನಿಷೇಧಿತ ಗುಟ್ಕಾ ಅಕ್ರಮ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಇವರ ಹಿಂದೆ ರಾಜಕಾರಣಿಗಳಿಬ್ಬರ ಹೆಸರುಗಳು ಕೇಳಿಬಂದಿರುವುದರಿಂದ ಈ ಪ್ರಕರಣ ಎಲ್ಲಿಗೆ ತಲುಪುವುದೆಂಬ ಬಂದ ವಿವಿಧ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.ಜೂನ್ 26 ರಂದು ಹೈದ್ರಾಬಾದ್ ನ ಜಮ್ಮೇರಾತ್ ಬಳಿ ವಿಮಲ್ ಗುಟ್ಕಾ ಹಾಗೂ...

ಪಂಚಮಸಾಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವೆ, ಒಡೆಯುವ ಕೆಲಸ ಅಲ್ಲ – ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿ

ಮೂಡಲಗಿ: ‘ಲಿಂಗಾಯತ ಪಂಚಮಸಾಲಿ ಸಂಘಟನೆಗೆ ಟೀಕೆ, ಅಡ್ಡಿಗಳು ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವುದು ನಮ್ಮ ಗುರಿಯಾಗಿದೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದರು.ಸ್ಥಳೀಯ ಎಲ್ಎಸ್ಎಂಪಿ ಸೊಸಾಯಿಟಿ ಕಾಂಪ್ಲೆಕ್ಸ್ ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಡನೆ...

ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಸವದತ್ತಿ - ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ತಾಲೂಕು ಪಂಚಾಯತ ಕಾರ್ಯಾಲಯದ ಮುಂಭಾಗದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸಿದರು.ಈ ಸಂದರ್ಬದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ, ತಾಲೂಕುಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತಕುಮಾರ, ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ, ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಸಿಂದಗಿ,...

ಹಸಿರೇ ಉಸಿರು ಹಸಿರಿನ ಮೂಲಕ ಪ್ರಕೃತಿಯನ್ನು ಉಳಿಸೋಣ – ರತ್ನಾ ಆನಂದ ಮಾಮನಿ

ಸವದತ್ತಿ - ಸಾಮಾಜಿಕ ಅರಣ್ಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಸಣ್ಣ ಪುಟ್ಟ ಬೆಟ್ಟಗುಡ್ಡಗಳು. ಗೋಮಾಳಗಳು ಮತ್ತು ಕೆರೆಗಳ ಸುತ್ತಮುತ್ತಲಿನ ಸರ್ಕಾರಿ ಜಮೀನುಗಳಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾದ ಸ್ಥಳೀಯ ಜಾತಿಯ ಗಿಡಮರಗಳನ್ನು ಬೆಳೆಸುವ ಮೂಲಕ ಹಸಿರನ್ನು ಉಳಿಸೋಣ. ಹಸಿರಿನ ಮೂಲಕ ನಮ್ಮ ಪ್ರಕೃತಿಯನ್ನು ಶುದ್ಧವಾಗಿಡೋಣ ಎಂದು ರತ್ನಾ ಆನಂದ ಮಾಮನಿ ತಿಳಿಸಿದರು.ಅವರು ಶಿಂತ್ರಿ...

ಬೆಳೆ ಸಮೀಕ್ಷೆ ಕುರಿತು ಪ್ರಕಟಣೆ

ಸವದತ್ತಿ - 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಕರ್ನಾಟಕ ಸರ್ಕಾರ ಆರಂಭಿಸಿದೆ.ಗೂಗಲ್ ಪ್ಲೇ ಸ್ಟೋರ್ ನಲ್ಲಿ farmers crop survey app 2021-22 ನ್ನು ಡೌನ್‍ಲೋಡ್ ಮಾಡಿಕೊಂಡು ರೈತರು ತಾವೇ...

ಚೈತನ್ಯವೇ ಜೀವನ ನಿಸ್ತೇಜವೇ ಮರಣ – ಮುಕ್ತಾನಂದ ಪೂಜ್ಯರು

ಸವದತ್ತಿ: “ ಚೈತನ್ಯವೇ ಜೀವನ ನಿಸ್ತೇಜವೇ ಮರಣ.ನಮ್ಮ ಬದುಕು ಸದಾ ಚೈತನ್ಯದಿಂದ ಕೂಡಿರಬೇಕು. ಚೈತನ್ಯವಿಲ್ಲದ ಶರೀರ ಮರಣ ಹೊಂದಿದ ಶರೀರವಿದ್ದಂತೆ ಎಂಬುದನ್ನು ನಾವು ವಿವೇಕಾನಂದರ ವಾಣಿಯ ಮೂಲಕ ನಾವು ತಿಳಿಯಬಹುದಾಗಿದೆ. ಜಗತ್ತಿನ ಎಲ್ಲದಕ್ಕೂ ಅಧ್ಯಾತ್ಮದ ತಳಹದಿಯಿದೆ.ಅದನ್ನು ತೋರಿಸಿದವರು ಋಷಿಮುನಿಗಳು. ಅತ್ಯಂತ ಶ್ರೇಷ್ಠ ವಿಚಾರ ಸರಳ ಬದುಕನ್ನು ತಿಳಿಸಿದ ಋಷಿ ಮುನಿಗಳ ಕೊಡುಗೆ ಬಹಳಷ್ಟಿದೆ. ನಮ್ಮ...

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ...

ಸರ್ಕಾರದ ಸಾಧನೆ ಜನತೆಗೆ ತಿಳಿಸಿ – ಕಾರ್ಯಕರ್ತರಿಗೆ ಈರಣ್ಣ ಕಡಾಡಿ ಸಲಹೆ

ಸಿಂದಗಿ: ಭೂತ್ ಮಟ್ಟದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಧನೆಗಳ ಕುರಿತು ಮನವರಿಕೆ ಮಾಡುವುದರ ಜೊತೆಗೆ ಪಕ್ಷ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರು, ಕೇಂದ್ರ ಆಹಾರ ನಿಗಮದ ರಾಜ್ಯದ ಮುಖ್ಯಸ್ಥರು ಹಾಗೂ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಬೀದರ ಜಿಲ್ಲೆಯ...

ಕೊರೋನಾ ವಾರಿಯರ್ಸ್‌ ಸನ್ಮಾನ

ಚಿಕ್ಕೋಡಿ - ಕೊರೋನಾ ನಿಯಂತ್ರಣಕ್ಕಾಗಿ ತಮ್ಮ ಪ್ರಾಣದ ಹಂಗುದೊರೆದು ಕರ್ತವ್ಯ ನಿರ್ವಹಿಸಿದ ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಪಂಚಾಯತ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ತಾಲೂಕಿನ ಕರೋಶಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಕರೋಶಿ, ನಾಗರಮುನ್ನೋಳಿ ಹಾಗೂ ಕಬ್ಬೂರ ಗ್ರಾಮಗಳ ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು. ಈ...

ಬ್ರಿಗೇಡಿಯರ್ ಸುಧೀಂದ್ರ ಇಟ್ನಾಳ ಸೇವಾ ನಿವೃತ್ತಿ

ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬ್ರಿಗೇಡಿಯರ್ ಸುಧೀಂದ್ರ ಇಟ್ನಾಳ ಅವರು ಜೂ.30ರಂದು ತಮ್ಮ ಸೇನಾ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸಿ ದೆಹಲಿಯಲ್ಲಿ ನಿವೃತ್ತಿ ಹೊಂದಿದ್ದಾರೆ.ಡಿಸೆಂಬರ್1987 ರಲ್ಲಿ ಇಂಡಿಯನ್ ಮಿಲಿಟರಿ ಅಕಾಡೆಮಿ ದೆಹರಾಡೂನ್ ನಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆಯಲ್ಲಿ ವಿವಿಧ ಹುದ್ದೆಗಳಲ್ಲಿ ವೈವಿಧ್ಯಮಯ ಜವಾಬ್ದಾರಿಯುತ 33 ವರುಷಗಳ ಸೇವೆಯನ್ನು ದೇಶಕ್ಕಾಗಿ ಯಶಸ್ವಿಯಾಗಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group