ಮಕ್ಕಳಿಗೆ ನೈತಿಕ ಶಿಕ್ಷಣ ನೀಡಬೇಕು – ರಾಜೇಂದ್ರ ಸಣ್ಣಕ್ಕಿ

Must Read

ಮೂಡಲಗಿ: ಮಕ್ಕಳಿಗೆ ಸಂಸ್ಕಾರಯುಕ್ತವಾಗಿರಲು ಪ್ರಮುಖವಾಗಿ ದೈವಿಕತೆ ಜೊತೆಗೆ ಅವರ ವೇಷಭೂಷಣಗಳನ್ನು ತೊಡಿಸುವ ಮೂಲಕ ನೈತಿಕ ಮೌಲ್ಯಯುಕ್ತ ಶಿಕ್ಷಣ ನೀಡಬೇಕು ಎಂದು ಮಾಜಿ ಜಿ.ಪಂ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು.

ಅವರು ಸಮೀಪದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಗಂಡು ಮಕ್ಕಳ ಶಾಲೆಯಲ್ಲಿ ಜರುಗಿದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ವಿದ್ಯೆಯೊಂದಿಗೆ ವಿನಯ ಬೆಳೆಸಿಕೊಳ್ಳಬೇಕು ಹಾಗೂ ದೇವರು, ಧರ್ಮದಲ್ಲಿ ಶೃದ್ಧೆ ಉಳ್ಳವರಾಗ ಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳು ಶ್ರೀಕೃಷ್ಣ ಮತ್ತು ರಾಧೆಯ ವೇಷ ಭೂಷಣದಲ್ಲಿ ಗಮನ ಸೇಳೆದು  ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ಈ ಸಂದರ್ಭದಲ್ಲಿ ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೂಡ, ಕುಲಗೋಡ ಪಿಎಸ್‍ಐ ಗೋವಿಂದಗೌಡ ಪಾಟೀಲ, ಪ್ರಧಾನಗುರು ಮಾಲತೇಶ ಸಣ್ಣಕ್ಕಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group