ಕಾವ್ಯ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ದಿನಾಚರಣೆ

Must Read

ಸಿಂದಗಿ: ಇಂದು ನಾವು ಮಕ್ಕಳಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಮಕ್ಕಳು ನಮ್ಮ ರಾಷ್ಟ್ರಕ್ಕೆ ಭವಿಷ್ಯದ ಭದ್ರ ಬುನಾದಿ ಆಗಲಿದ್ದಾರೆ. ಹಾಗಾಗಿ ಇಂದಿನ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ನಮ್ಮ ಇಡೀ ರಾಷ್ಟ್ರದ ಭವಿಷ್ಯ ನಿಂತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕಾಂಚನಾ ಚ ನಾಗರಬೆಟ್ಟ ಹೇಳಿದರು,

ಪಟ್ಟಣದ ಕಾವ್ಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರ ನಿರ್ಮಾಣದ ಇಟ್ಟಿಗೆಗಳು ರಾಷ್ಟ್ರವನ್ನು ಒಂದು ಕಟ್ಟಲಾಗುತ್ತಿರುವ ಮನೆಯೆಂದು ಪರಿಗಣಿಸುವುದಾದರೆ ಮಕ್ಕಳು ಆ ಮನೆ ನಿರ್ಮಾಣದ ಇಟ್ಟಿಗೆಗಳಂತೆ ನಾವೆಷ್ಟು ಉತ್ತಮವಾದ ಇಟ್ಟಿಗೆಯನ್ನು ಮನೆಯ ನಿರ್ಮಾಣಕ್ಕಾಗಿ ಸಜ್ಜುಗೊಳಿಸುತ್ತೇವೆಯೋ ಅಷ್ಟು ಸುಂದರವಾದ ಮನೆ ನಿರ್ಮಾಣ ವಾಗುತ್ತದೆ ದೇಶದ ಸಂಸ್ಕೃತಿ, ಕಲೆ, ಸಾಹಿತ್ಯ, ಸಂಪ್ರದಾಯ ಎಲ್ಲವೂ ಉಳಿದು ಬೆಳೆದು ಸಾಗಬೇಕು. ಮಕ್ಕಳಿಗೆ ಜವಾಹರ್ ಲಾಲ್ ನೆಹರು ಅವರ ಜೀವನ ಚರಿತ್ರೆ ವಿವರಿಸಿ ಇಂದಿನ ಮಕ್ಕಳೇ ಭವಿಷ್ಯದ ನಾಡಿನ ಪ್ರಜೆಗಳು ಎಂದರು.

ಈ ಸಂದರ್ಭದಲ್ಲಿ ಶ್ರೀಮತಿ ವಿದ್ಯಾ ಪತ್ತಾರ್  ಮಾತನಾಡಿ, ಆದ್ರೆ ಪ್ರತಿಯೊಬ್ಬ ಹಿರಿಯರ ಒಳಗಿರುವ ಮಗು ಜೀವಂತವಾಗಿರಬೇಕು ಮತ್ತು ಪ್ರತಿ ಮಗುವಿಗೂ ಅತ್ಯುತ್ತಮ ಪೋಷಣೆಯ ಅಡಿಪಾಯ ಈ ದಿನ ಪೋಷಕರಾಗಿ ಮಾಡಬೇಕಿರುವ ಪ್ರಮುಖ ಜವಾಬ್ದಾರಿ ಮಕ್ಕಳ ಬೆಳವಣಿಗೆಗೆ ನಿಮ್ಮ ಕೊಡುಗೆ ಹೇಗಿರಬೇಕು ಎಂಬ ಬಗ್ಗೆ ಚಿಂತನೆ ನಡೆಸುವುದು ದೇಶದ ಪ್ರತಿ ಮಗುವಿಗೂ ಕೂಡ ಶಿಕ್ಷಣ ದೊರಕುವಂತಾಗಬೇಕು. ಲಾಲನೆ ಪಾಲನೆಯಲ್ಲಿ ಯಾವುದೇ ಕೊರತೆಯಾಗ ಬಾರದು ಅವರು ಕೂಡ ಬೆಳೆಯ ಸಿರಿಯನ್ನು ಮೊಳಕೆಯಲ್ಲಿ ನೋಡು ಎಂಬಂತೆ ಮಕ್ಕಳು ಮನೆಗೆ ಕೀರ್ತಿಯನ್ನು ಹಾಗೂ ದೇಶದ ಕೀರ್ತಿಯನ್ನು ತರಬೇಕು ಮಕ್ಕಳೇ ನಮ್ಮ ದೇಶದ ಸಂಪತ್ತು ಎಂದು ತಿಳಿಸಿದರು.

ಮಕ್ಕಳಿಗಾಗಿ ರಂಗೋಲಿ ಸ್ಪರ್ಧೆ, ಓಟದ ಸ್ಪರ್ಧೆ, ಮ್ಯೂಸಿಕಲ್ ಚೇರ್ ಲೆಮನ್ ಸ್ಪೂನ್, ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ  ಶಿಕ್ಷಕಿಯರಾದ ಸುಮಾ ವಸ್ತ್ರ ದ, ರೇಷ್ಮಾ ಶಾಲಿನಿ, ಮೂಬಿನಾ, ಗೀತಾ ಬಿರಾದಾರ, ಸುಮಾ ಬಿರಾದಾರ, ಸುಮಯ್ಯ, ನಾಗರಾಜ ಹಾಗೂ ಮಕ್ಕಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಶಿಕ್ಷಕಿ ರೇಷ್ಮಾ ನಿರೂಪಿಸಿದರು,  ಶಿಕ್ಷಕಿ ಸುಮಯ್ಯ ವಂದಿಸಿದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group