Homeಸುದ್ದಿಗಳುಹಿರಿಯ ಮಕ್ಕಳ ಸಾಹಿತಿಗೆ ' ಮಕ್ಕಳ ಸಾಹಿತ್ಯ ಭೂಷಣ ' ಪ್ರಶಸ್ತಿ

ಹಿರಿಯ ಮಕ್ಕಳ ಸಾಹಿತಿಗೆ ‘ ಮಕ್ಕಳ ಸಾಹಿತ್ಯ ಭೂಷಣ ‘ ಪ್ರಶಸ್ತಿ

ಸಿಂದಗಿ: ಪಟ್ಟಣದ ವಿದ್ಯಾಚೇತನ ಪ್ರಕಾಶನವು ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ 60 ವರ್ಷ ಮೇಲ್ಪಟ್ಟ ಹಿರಿಯ ಸಾಹಿತಿಗೆ ರಾಜ್ಯ ಮಟ್ಟದ ‘ಮಕ್ಕಳ ಸಾಹಿತ್ಯ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ.
    ಪ್ರಸಕ್ತ ವರ್ಷ 2025-26 ನೇ ಸಾಲಿನಲ್ಲಿ ಈ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನ ಮುಳವಾಡ ಗ್ರಾಮದ ಖ್ಯಾತ ಮಕ್ಕಳ ಸಾಹಿತಿ ಪ.ಗು. ಸಿದ್ದಾಪುರ ಅವರು ಆಯ್ಕೆಯಾಗಿದ್ದಾರೆ.
   ಈ ಪ್ರಶಸ್ತಿ 15000 ರೂ. ನಗದು ಬಹುಮಾನದೊಂದಿಗೆ ಪ್ರಶಸ್ತಿ ಫಲಕ  ಒಳಗೊಂಡಿರುತ್ತದೆ. ಜೂ. 11 ರಂದು ಪಟ್ಟಣದ ಸಾರಂಗಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಯುತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಾಶಕ, ಮಕ್ಕಳ ಸಾಹಿತಿ ಹ.ಮ. ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group