ಬೀದರ- ಪುರಸಭೆಯ ವಾಹನವನ್ನು ಪಕ್ಷದ ಕೆಲಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಳಸಿ ಕೊಳ್ಳುತ್ತಿರುವುದನ್ನು ಕಂಡು ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ದೂರು ನೀಡಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಮಾತಿನ ಚಕಮಕಿ ನಡೆಯಿತು.
ಭಾಲ್ಕಿ ನಗರದಲ್ಲಿ ಶುಕ್ರವಾರ ಸಾಯಂಕಾಲ 4:00 ಗಂಟೆಗೆ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ಧ್ವಜ ಮತ್ತು ಫ್ಲೆಕ್ಸ್ ಗಳನ್ನು ಅಳವಡಿಸಲು ಪುರಸಭೆಯ ವಾಹನವನ್ನು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಮುಖಂಡ ಡಿ.ಕೆ ಸಿದ್ರಾಮ ಮತ್ತು ಅವರ ಬೆಂಬಲಿಗರು ತಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಪುರಸಭೆಯ ವಾಹನವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ ಬಿಜೆಪಿ ಮುಖಂಡ ಡಿ.ಕೆ ಸಿದ್ರಾಮ ಹಾಗೂ ಕಾರ್ಯಕರ್ತರು ಅಲ್ಲಿಂದ ತೆರಳಿದರು.
ವರದಿ: ನಂದಕುಮಾರ ಕರಂಜೆ, ಬೀದರ