ಯೋಗ ತರಬೇತಿ ಶಿಬಿರ ಮುಕ್ತಾಯ ಸಮಾರಂಭ

Must Read

ಮುನವಳ್ಳಿ: ಪಟ್ಟಣದ ಸೋಮಶೇಖರ ಮಠದಲ್ಲಿ ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಯೋಗ ಪಟು ಕಾರ್ತಿಕ ಬೆಲ್ಲದ ಮಹಿಳೆಯರಿಗೆ ಉಚಿತ ಯೋಗ ತರಬೇತಿ ಶಿಬಿರ ಆಯೋಜಿಸಿದ್ದು ಅದರ ಸಮಾರೋಪ ಸಮಾರಂಭ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸಂಗಮೇಶ ದೇವರು ವಹಿಸಿದ್ದರು. ಅತಿಥಿಗಳಾದ ಎಸ್.ಪಿ.ಜೆ.ಜಿ.ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಎ.ಪಿ.ಲಂಬೂನವರ, ಶಿಕ್ಷಕ ಬಿ.ಬಿ.ಹುಲಿಗೊಪ್ಪ,ಮಾಧ್ಯಮ ಪ್ರತಿನಿಧಿ ಪ್ರಶಾಂತ ತುಳಜನ್ನವರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ  ಸಂಗಮೇಶ ದೇವರು, “ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಯೋಗ ಉತ್ತಮ ಉಪಾಯ.ಯೋಗ ಮಾಡುವುದರಿಂದ ನಿಮ್ಮ ಮನಸ್ಸು ಮತ್ತು ದೇಹ ಎರಡನ್ನೂ ಆರೋಗ್ಯವಾಗಿಟ್ಟುಕೊಳ್ಳಬಹುದು. ರಕ್ತದ ಒತ್ತಡ, ತೂಕ ಕಡಿಮೆ ಮಾಡಿಕೊಳ್ಳುವ, ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು, ಕೊಲೆಸ್ಟ್ರಾಲ್ ಅನ್ನು ಹತೋಟಿ ಇಡುವಲ್ಲಿ ಯೋಗ ಸಕಾರಾತ್ಮಕವಾದ ಪರಿಣಾಮವನ್ನು ನೀಡುವುದರಿಂದ ಇಂದು ಜಗತ್ತಿನಾದ್ಯಂತ ಯೋಗ ತನ್ನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ.

ನಮ್ಮ ದೇಶದ ಸಂಸ್ಕೃತಿಯಲ್ಲಿ ಯೋಗಕ್ಕೆ ಪುರಾತನದಿಂದಲೂ  ಮಹತ್ವ ನೀಡುತ್ತ ಬಂದಿರುವರು”ಎಂದು ಯೋಗದ ಮಹತ್ವ ಕುರಿತು ತಿಳಿಸಿದರು.

ಯೋಗಪಟು ಕಾರ್ತಿಕ ಬೆಲ್ಲದ ಮಾತನಾಡಿ, ದೈನಂದಿನ ಆರೋಗ್ಯದಲ್ಲಿ ಯೋಗದ ಮಹತ್ವವೇನು.? ನಿತ್ಯದ ಬದುಕಿನಲ್ಲಿ  ಹಂತ ಹಂತವಾಗಿ ನಾವು ಅಳವಡಿಸಿಕೊಳ್ಳಬೇಕಾದ ಆಸನಗಳು. ಅದರಲ್ಲೂ ಮಹಿಳೆಯರು ದೈನಂದಿನ ಬದುಕಿನಲ್ಲಿ  ಮಾಡಬೇಕಾದ ಆಸನಗಳು ಅವುಗಳ ಮಹತ್ವ ಕುರಿತು ಸಮಗ್ರವಾಗಿ ಮಾಹಿತಿಯನ್ನು ನೀಡಿದರು. ಯೋಗ ತರಬೇತಿ ಶಿಬಿರದಲ್ಲಿ ಇಪ್ಪತ್ತೈದು ಮಹಿಳೆಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಅವರೆಲ್ಲರೂ ಸೇರಿ ಇದೇ ಸಂದರ್ಭದಲ್ಲಿ ಕಾರ್ತಿಕ್ ಬೆಲ್ಲದ ಅವರನ್ನು ಸನ್ಮಾನಿಸಿ ಗೌರವಿಸಿದರು.ಸೋಮಶೇಖರ ಮಠದಿಂದ ಗುರುರಕ್ಷೆಯನ್ನು ಕೂಡ ನೀಡಲಾಯಿತು. ಈ ಕಾರ್ಯಕ್ರಮವನ್ನು ಶಿಕ್ಷಕ ಬಿ.ಬಿ.ಹುಲಿಗೊಪ್ಪ ನಿರೂಪಿಸಿದರು.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group