ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲು.
ಬೀದರ – ಚುನಾವಣೆ ವೆಚ್ಚಕ್ಕೆಂದು ರೂ.೯೯ ಲಕ್ಷ ತನ್ನ ಕಡೆಯಿಂದ ಪಡೆದ ಸಾಲವನ್ನು ಹಿಂತಿರುಗಿಸದ ಬಸವಕಲ್ಯಾಣ ಶಾಸಕ ಶರಣು ಸಲಗರ ವಿರುದ್ಧ ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬುವರಿಂದ ದೂರು ದಾಖಲಾಗಿದೆ
ಶ್ಯೂರಿಟಿಗಾಗಿ ಖಾಲಿ ಚೆಕ್ ಹಾಗೂ ಲೆಟರ್ ಹೆಡ್ ಮೇಲೆ ಸೈನ್ ಮಾಡಿ ಕೊಟಿದ್ದರಂತೆ.ಎಷ್ಟು ಬಾರಿ ಹಣ ಕೇಳಿದರೂ ಸಾಲ ಮರುಪಾವತಿಸಿಲ್ವಂತೆ ಶಾಸಕ ಸಲಗರ್. ಬಳಿಕ 14-9-2025 ರಂದು ಹಿರಿಯರ ಸಮ್ಮುಖದಲ್ಲಿ ಹಣ ನೀಡುವುದಾಗಿ ಒಪ್ಪಿ ಚೆಕ್ ನೀಡಿದ್ದರು16-9-2025 ರಂದು ಶಾಸಕರ ಮನೆಗೆ ತೆರಳಿದ ಉದ್ಯಮಿ ಸಂಜು ಸುಗುರೆ ಹೆಂಡತಿ ಹಾಗೂ ಮಗ ಶರಣು ಸಲಗರ್ ನೀಡಿದ ಚೆಕ್ ಬ್ಯಾಂಕಿಗೆ ಹಾಕಲು ಖಾತ್ರಿಪಡಿಸಲು ಹೋದ ವೇಳೆ ಶಾಸಕರ ಮನೆಯಲ್ಲಿ ಗಲಾಟೆಯಾಗಿದೆ.
ಚೆಕ್ ಅನ್ನು ಬ್ಯಾಂಕಗೆ ಹಾಕುವುದಾಗಿ ಹೇಳಿದ್ದಕ್ಕಾಗಿ ಉದ್ಯಮಿಯ ಹೆಂಡತಿ ಹಾಗೂ ಮಗನಿಗೆ ಶಾಸಕರು ಧಮ್ಕಿ ಹಾಕಿದ್ರಂತೆ.ಹಣ ವಾಪಸ್ ಕೊಡಿ ಎಂದು ಮನೆಗೆ ಹೋದರೆ ಅವಾಚ್ಯ ಶಬ್ದಗಳಿಂದ ಬೈದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖ.

ಕೋರ್ಟ್ ಸೂಚನೆ ಮೇರೆಗೆ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ವರದಿ : ನಂದಕುಮಾರ ಕರಂಜೆ, ಬೀದರ

