spot_img
spot_img

ಶಾಂತಿಯ ನಾಡಲ್ಲಿ ದ್ವೇಷ ಬಿತ್ತುತ್ತಿರುವ ಕಾಂಗ್ರೆಸ್ – ಈರಣ್ಣ ಅಂಗಡಿ

Must Read

spot_img
ಮೂಡಲಗಿ:-  ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ಕಾಂಗ್ರೆಸ್ ಪಕ್ಷವು ವಕ್ಫ್ ಮಂಡಳಿಯ ಮೂಲಕ ದ್ವೇಷದ ನಾಡನ್ನಾಗಿ ಪರಿವರ್ತಿಸಿ ಅತ್ಯಂತ  ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ  ಉಪಾಧ್ಯಕ್ಷರಾದ ಈರಣ್ಣ ಅಂಗಡಿ ಹೇಳಿದರು.
   ಸೋಮವಾರದಂದು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ವಕ್ಫ್ ಬೋರ್ಡ್ ವಿರುದ್ಧ ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿರುವ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ
ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್ ಪರಿಶೀಲನೆಯಲ್ಲಿದೆ  ಎಂದರು.
     ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ವಕ್ಫ್  ಕಾಯ್ದೆಗೆ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ  ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ.
ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ  ಕಾಂಗ್ರೆಸ್ ಸರಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು  ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಎಂದು
ಕಳಕಳಿ ವ್ಯಕ್ತಪಡಿಸಿದರು.
   ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ ಹಾಗೂ ಬಿಜೆಪಿ ಅರಭಾವಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಮಾತನಾಡಿ, ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ  ಧಕ್ಕೆಯಾಗುವಂತಹ ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಸರಕಾರ  ಕೈಗೊಳ್ಳುವ ಮತ್ತು ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಹಿಂದೂ ವಿರೋಧಿ  ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕು, ಸಿದ್ದರಾಮಯ್ಯನವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಸ್  ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ
ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು  ಒಪ್ಪುವುದಿಲ್ಲ. ಈ ರೀತಿಯ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸರಕಾರ ಮುಂದುವರೆಸಿದಲ್ಲಿ, ಬಿಜೆಪಿಯು ಇಡೀ ರಾಜ್ಯದಲ್ಲಿ
ಜನತೆಯನ್ನು ಒಗ್ಗೂಡಿಸಿ ಉಗ್ರ ಪ್ರತಿಭಟನೆಯನ್ನು
ಹಮ್ಮಿಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಮನವಿ ಮೂಲಕ  ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು.
    ಈ ಸಂಧರ್ಭದಲ್ಲಿ ಬಿಜೆಪಿ ಅರಭಾವಿ ಮಂಡಲ ಪದಾಧಿಕಾರಿಗಳಾದ ಪಾಂಡು  ಮಹೇಂದ್ರಕರ್, ಕೇದಾರಿ ಭಸ್ಮೆ, ತಿಪ್ಪಣ್ಣ ಕುರುಬಗಟ್ಟಿ, ಜಗದೀಶ್ ತೇಲಿ,ಕುಮಾರ್ ಗಿರಡ್ಡಿ, ಮಲ್ಲು ಯಾದವಾಡ, ಹನಮಂತ ಸತರಡ್ಡಿ, ಡಾ.ಬಸವರಾಜ್  ಫಾಲಭಾವಿ, ಸಿದ್ದಣ್ಣ ದುರದುಂಡಿ, ಯಲ್ಲಾಲಿಂಗ್ ವಾಳದ, ಬಸವರಾಜ ಶೆಕ್ಕಿ, ಪರಪ್ಪ
ಹಡಪದ, ಚೇತನ್ ನಿಶಾನಿಮಠ, ಯಮನಪ್ಪ ಮೇತ್ರಿ,  ಮುರಗೋಡ, ಮಹಾಲಿಂಗ ಒಂಟಗೋಡಿ, ಶ್ರೀಶೈಲ ಶೆಕ್ಕಿ ಇನ್ನು ಅನೇಕ ಬಿಜೆಪಿ

- Advertisement -

ಕಾರ್ಯಕರ್ತರು ಭಾಗಿಯಾಗಿದ್ದರು.

- Advertisement -
- Advertisement -

Latest News

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ....
- Advertisement -

More Articles Like This

- Advertisement -
close
error: Content is protected !!
Join WhatsApp Group