ವಿದ್ಯಾರ್ಥಿಗಳಿಂದ ವಸತಿ ನಿಲಯದಲ್ಲಿ ಉದ್ಯಾನವನ ನಿರ್ಮಾಣ

Must Read

ಬೆಳಗಾವಿ: ಸ್ಥಳೀಯ ಕಣಬರ್ಗಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ-2 ರಲ್ಲಿ ಸ್ವಚ್ಛಂದ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಸತಿ ನಿಲಯದ ಆವರಣದಲ್ಲಿ ಮನೋಹರ ಉದ್ಯಾನವನವನ್ನು ಸ್ವಯಂ ಸ್ಪೂರ್ತಿಯಿಂದ ನಿರ್ಮಾಣ ಮಾಡುತ್ತಿದ್ದಾರೆ.

ಇದರಿಂದ ವಸತಿ ನಿಲಯದ ಆವರಣ ಸೌಂದರ್ಯೀಕರಣವಾಗುವುದರಲ್ಲಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತದೆ ಆದುದರಿಂದ ವಿದ್ಯಾರ್ಥಿಗಳೇ ಆಸಕ್ತಿವಹಿಸಿ ನಿಲಯದಲ್ಲಿ ವಿವಿಧ ಸಸಿಗಳನ್ನು ನೆಡುವುದರ ಮೂಲಕ ಇಂದು ಉದ್ಯಾನವನವನ್ನು  ನಿರ್ಮಿಸಿದ್ದಾರೆ.

ಇದಕ್ಕೆ ಪೂರಕವಾಗಿ ವಸತಿ ನಿಲಯದ ಪಾಲಕರಾದ ಶ್ರೀಕಾಂತ್ ದೇವಲತ್ತಿ ಅವರು ವಿದ್ಯಾರ್ಥಿಗಳಿಗೆ ಸಹಾಯ ಮತ್ತು ಸಹಕಾರವನ್ನು ನೀಡಿ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ನೀಡಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group