Homeಸುದ್ದಿಗಳುಕೊರೋನಾ; ಮುಂಜಾಗೃತೆ ವಹಿಸಲು ಸೂಚನೆ

ಕೊರೋನಾ; ಮುಂಜಾಗೃತೆ ವಹಿಸಲು ಸೂಚನೆ

ಸಿಂದಗಿ: ಕರೋನ ಅಲೆಯ ಭೀತಿಯಿಂದ ಹೊರಬಂದಿರುವ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿ ಕರೋನ ಅಲೆಯ ಬಗ್ಗೆ ಮಕ್ಕಳಿಗೆ ಮುಂಜಾಗೃತಾ ಕ್ರಮಗಳನ್ನು ವಹಿಸುವಂತೆ ಶಿಕ್ಷಕರಿಗೆ ಶಾಸಕ ರಮೇಶ ಭೂಸನೂರ ಸೂಚಿಸಿದರು.

ತಾಲೂಕಿನ ಸಾಸಾಬಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬಗ್ಗೆ ಸಮಗ್ರ ಮಾಹಿತಿ ಪಡೆದು ಮುಂದಿನ ಅಧಿವೇಶನದಲ್ಲಿ ಸಿಂದಗಿ ತಾಲ್ಲೂಕಿನಲ್ಲಿ ಬಹಳಷ್ಟು ಶಾಲಾ ಕೋಣೆಗಳನ್ನು ಮಂಜೂರು ಮಾಡುವಂತೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿ ಮಕ್ಕಳಿಗೆ ಸಿಹಿ ತಿನಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಸಂತೋಷ ಪಾಟೀಲ, ಶ್ರೀಶೈಲ ಚಳ್ಳಗಿ, ಗೌಡಣ್ಣ ಆಲಮೇಲ, ಸಿದ್ದು ಬುಳ್ಳಾ ಸೇರಿದಂತೆ ಅನೇಕರಿದ್ದರು.

RELATED ARTICLES

Most Popular

error: Content is protected !!
Join WhatsApp Group