spot_img
spot_img

ಯುವತಿಯ ಶವ ಪತ್ತೆ ; ಆತ್ಮಹತ್ಯೆಯೋ ಕೊಲೆಯೋ…?

Must Read

- Advertisement -

ಮೂಡಲಗಿ – ಕೆಲವು ದಿನಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದಾಳೆ ಎನ್ನಲಾಗಿದ್ದ ಯುವತಿಯ ಶವ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ನೀರಿನ ಹೊಂಡವೊಂದರಲ್ಲಿ ಪತ್ತೆಯಾಗಿದ್ದು ಇದು ಆತ್ಮಹತ್ಯೆಯೋ ಕೊಲೆಯೋ ಎಂಬುದು ತನಿಖೆಯಿಂದ ಹೊರಬರಬೇಕಿದೆ.

ಶ್ರುತಿ ಸಾತರೆಡ್ಡಿ ಎನ್ನುವವಳೇ ಮೃತ ದುರ್ದೈವಿ. ಕೆಲವು ದಿನಗಳ ಹಿಂದೆ ಶಂಕರ ನಾಯಕ ಎಂಬ ಯುವಕ ಈ ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ, ಬೆದರಿಸಿ ಲೈಂಗಿಕ ಸಂಪರ್ಕ ಮಾಡಿದ್ದಾಗಿ ಆರೋಪಿಸಲಾದ ಹಿನ್ನೆಲೆಯಲ್ಲಿ ಆರೋಪಿ ಇನ್ನೂ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇದ್ದು ಇವಾಗಲೇ ಯುವತಿ ಸಾವಿಗೀಡಾಗಿದ್ದು ಊಹಾಪೋಹಗಳಿಗೆ ಕಾರಣವಾಗಿದೆ.

ಇದು ಆತ್ಮಹತ್ಯೆಯೋ ಕೊಲೆಯೋ ಎಂಬುದು ಶಂಕಾಸ್ಪದವಾಗಿದ್ದು ಮನೆಯಲ್ಲಿನ ಕಿರುಕುಳ ತಾಳಲಾರದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬುದಾಗಿ ಊಹಾಪೋಹಗಳು ವ್ಯಕ್ತವಾಗುತ್ತಿವೆ.

- Advertisement -

ನಿನ್ನೆ ಬೆಳಿಗ್ಗೆಯಿಂದಲೇ ಯುವತಿ ಕಾಣೆಯಾಗಿದ್ದು ಘಟಪ್ರಭಾ ನದಿಯ ದಂಡೆಯಲ್ಲಿ ಅವಳ ಸೈಕಲ್ ಹಾಗೂ ಚಪ್ಪಲಿ ಕಂಡುಬಂದಿದ್ದರಿಂದ ಅವಳಿಗಾಗಿ ಶೋಧ ಕಾರ್ಯ ನಡೆದಿತ್ತು ಇಂದು ಬೆಳಿಗ್ಗೆ ಯುವತಿಯ ಶವ ಸಿಕ್ಕಿದೆ.

ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group