ಭಾಲ್ಕಿ ತಹಶೀಲ್ದಾರ ಕಚೇರಿಯಲ್ಲಿ ಲಂಚಗುಳಿತನ

Must Read

ಬೀದರ – ರೈತರ ಪಹಣಿ ಬದಲಾವಣೆ ಮಾಡಿಕೊಡಲು ರೈತನಿಂದ ೧೩೦೦ ರೂ. ಲಂಚವನ್ನು ಫೋನ್ ಪೇ ಮೂಲಕ ಭಾಲ್ಕಿ ತಹಶೀಲ್ದಾರ ಕಚೇರಿಯ ಅಧಿಕಾರಿ ಪಡೆದುಕೊಂಡಿದ್ದು ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಾರ್ವಜನಿಕರು ಮಾತನಾಡುವಂತಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನಿವಾಸದ ಪಕ್ಕದಲ್ಲಿಯೇ ತಹಶೀಲ್ದಾರ ಕಚೇರಿ ಇದ್ದು ಇಲ್ಲಿ ನಡೆಯುವ ಭ್ರಷ್ಟಾಚಾರದ ಬಗ್ಗೆ ಸಚಿವರಿಗೆ ಅರಿವಿಲ್ಲವೇ ಎಂದು ಕೇಳುತ್ತಿದ್ದಾರೆ.

ಅಧಿಕಾರಿಯು ಫೋನ್ ಪೇ ಮೂಲಕ ಹಣ ಪಡೆದುಕೊಂಡಿದ್ದನ್ನು ರೈತರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ.
ಇದರಿಂದ ನಮ್ಮ ಸರ್ಕಾರ ರೈತರ ಪರವಾಗಿ ಇದೆ ಎಂಬ ಸರ್ಕಾರದ ಮಾತು ಬರೀ ಬೊಗಳೆ ಎಂದಂತಾಗಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group