ಸವದತ್ತಿ: ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಿಸುವ ಬೃಹತ್ ಅಭಿಯಾನ ದಿ. 1ನೇ ಜುಲೈ 2021ರಂದು ಗುರುವಾರ ಬೆಳಿಗ್ಗೆ 10-00 ಗಂಟೆಗೆ ಸವದತ್ತಿಯ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಮಹಾವಿದ್ಯಾಲಯ ಮತ್ತು ತಾಲೂಕ ಆಡಳಿತ ಹಾಗೂ ತಾಲೂಕ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಪ್ರೊ.ಮಾರುತಿ ಎ. ದೊಂಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಹಂತದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಕರ್ನಾಟಕ ಸರಕಾರವು ಕೋವಿಡ್ ಲಸಿಕೆ ನೀಡಲು ಆದೇಶಿಸಿದೆ. ಈ ಆದೇಶದನ್ವಯ ಎಲ್ಲ ವಿದ್ಯಾರ್ಥಿಗಳು ಮೊದಲ ಹಂತದ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡೇ ಕಾಲೇಜಿನ ಭೌತಿಕ ತರಗತಿಗಳಿಗೆ ಹಾಜರಾಗುವಂತೆ ನಿಯಮ ರೂಪಿಸಲಾಗಿದೆ. ಲಸಿಕೆ ಹಾಕಿಸಿಕೊಳ್ಳದಿದ್ದವರು ಭೌತಿಕ ತರಗತಿಗಳಿಗೆ ಹಾಜರಾಗಲು ಅನುಮತಿ ಇರುವುದಿಲ್ಲವೆಂದು ಸರಕಾರವು ಆದೇಶಿಸಿದೆ.
ಹೀಗಾಗಿ ದಿನಾಂಕ 1ನೇ ಜುಲೈ 2021ರಂದು ಬೃಹತ್ ಸ್ವಯಂ ಲಸಿಕಾ ಅಭಿಯಾನಕ್ಕೆ ಬರುವ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ನ್ನು ತಪ್ಪದೆ ತೆಗೆದುಕೊಂಡು ಬರುವಂತೆ ಕೋರಿದ್ದಾರೆ.