ನಿಗೂಢ ಕಾಯಿಲೆಗೆ ಹಸುಗಳು ಬಲಿ

Must Read

ಕೋಲಾರ – ನಿಗೂಢ ಕಾಯಿಲೆಯೊಂದು ಕಾಣಿಸಿಕೊಂಡ ಪರಿಣಾಮ ಒಂದೇ ವಾರದಲ್ಲಿ ೧೦ ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೊಳತೂರು ಗ್ರಾಮದಲ್ಲಿ ನಡೆದಿದೆ.

ವೈರಸ್ ಸೋಂಕಿತ ಬಸವನ ಹುಳುಗಳು ಕಾರಣ ಎನ್ನಲಾಗುತ್ತಿದ್ದು ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಜಗದೀಶ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸೋಂಕು ಕಾಣಿಸಿಕೊಂಡ ಎರಡೇ ದಿನಕ್ಕೆ ಹಸುಗಳು ಸಾವನ್ನಪ್ಪುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ.

ಇತ್ತ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಬೀದರ ಜಿಲ್ಲೆಗೆ ಮಾತ್ರ ಸೀಮಿತರಾಗಿದ್ದಾರೆ ಎಂದು ಆರೋಪಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದು ಮೃತಪಟ್ಟ ಹಸುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group