spot_img
spot_img

ದಾಸ ಶ್ರೇಷ್ಠರು ಭಕ್ತ ಕನಕದಾಸರು – ಅಲ್ಲಾಪುರ

Must Read

spot_img
- Advertisement -

ಸಿಂದಗಿ: ಭಕ್ತಿ ಹಾಗೂ ದಾಸ ಪರಂಪರೆಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ನಿಲ್ಲುವವರು ದಾಸ ಶ್ರೇಷ್ಠ ಕನಕದಾಸರು ಎಂದು  ಲಿಂಬೆ ಅಭಿವೃದ್ದಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ  ಹೇಳಿದರು.

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಹಮ್ಮಿಕೊಂಡ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ದೇವನೊಲಿದಾತನೇ ನಿಜವಾದ ಕುಲಜ ಎಂಬ ಸರ್ವ ಕಾಲಿಕ ಸತ್ಯವನ್ನು ಲೋಕಕ್ಕೆ ಸಾರಿದವರು ಭಕ್ತ ಕನಕದಾಸರು ಎಂದರು.

ಅಬು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಎ.ಖತೀಬ, ಶಿಲ್ಪಾ ಕುದರಗೊಂಡ, ಪತ್ರಕರ್ತ ಆನಂದ ಶಾಬಾದಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ ಮಾತನಾಡಿದರು.

- Advertisement -

ಈ ವೇಳೆ ಶರಣಮ್ಮ ನಾಯಕ, ಶಾಂತೂ ರಾಣಾಗೋಳ, ಗೊಲ್ಲಾಳಪ್ಪ ಬಿರಾದಾರ, ಎಸ್.ಎಮ್ ಚಿಗರಿ, ವರ್ಷಾ ಪಾಟೀಲ, ಅಶ್ವಿನಿ ಪಾತ್ರೋಟ, ಬೀರು ಚೌಧರಿ ಸೇರಿದಂತೆ ಅನೇಕರಿದ್ದರು.

ಇದೇ ಸಂದರ್ಭದಲ್ಲಿ ಕಸಾಪ ನೂತನ ಅಧ್ಯಕ್ಷ ಶಿವಾನಂದ ಬಡಾನೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲನಗೌಡ ಪಾಟೀಲ ನಿರೂಪಿಸಿದರು. ಅಂಬಿಕಾ ಪಾಟೀಲ ವಂದಿಸಿದರು.

- Advertisement -
- Advertisement -

Latest News

 ದಿ. 9 ರಂದು ಕಪ್ಪತಗುಡ್ಡದಲ್ಲಿ 9 ನೇ “ಮಾಸಿಕ ಚಾರಣ ಸಂಭ್ರಮ ಹಾಗೂ ಸಸ್ಯಾನುಭಾವ”

ಗದಗ - ಚಾರಣ ಪ್ರಿಯರು ಮತ್ತು ಸಸ್ಯ ಪ್ರಬೇಧಗಳ ಅಧ್ಯಯನ ನಡೆಸಲು ಕ್ಷೇತ್ರಭೇಟಿ ನೀಡಬಯಸುವ ಸಂಶೋಧನಾಕಾರರಿಗೆ, ಅಧ್ಯಾಪಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಆಯುರ್ವೇದ ಹಾಗೂ ಪಾರಂಪರಿಕ ವೈದ್ಯರಿಗೆ,...
- Advertisement -

More Articles Like This

- Advertisement -
close
error: Content is protected !!
Join WhatsApp Group