ಕಾರ್ಯನಿರತ ಪತ್ರಕರ್ತ ಪದಾಧಿಕಾರಿಗಳಿಗೆ ಆತ್ಮೀಯ ಸನ್ಮಾನ

Must Read

ಸಿಂದಗಿ: ಪಟ್ಟಣದ ಉದಯಕಾಲ ಪತ್ರಿಕಾ ಕಾಯಾಲಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪದಾದಿಕಾರಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತ ಪಂಡಿತ ಯಂಪೂರೆ ಮಾತನಾಡಿ, ಸೋಲು ಗೆಲವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣ ಪ್ರತಿಯೊಬ್ಬರಲ್ಲಿ ಬಂದಾಗ ಮಾತ್ರ ದ್ವೇಷವನ್ನು ಅಳಿಸಲು ಸಾಧ್ಯ. ಸ್ಪರ್ಧಾ ಕಣದಲ್ಲಿ ಮಾತ್ರ ಎದುರಾಳಿ ಆಯ್ಕೆಯಾದ ನಂತರ ಸದಸ್ಯರಲ್ಲಿ ಜಾತಿಯ ಲೇಪ ಬಿತ್ತದೆ ಎಲ್ಲರು ಒಂದೇ ಎನ್ನುವ ಭಾವನೆ ತಾಳಬೇಕು ಮತ್ತು ಎಲ್ಲರು ಒಕ್ಕಟ್ಟಿನಿಂದ ಪ್ರದರ್ಶನ ನೀಡುವ ಮೂಲಕ ಅಭಿವೃದ್ಧಿಪಥದತ್ತ ದಾಪುಗಾಲು ಹಾಕಬೇಕು ಎಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಅನಂದ ಶಾಬಾದಿ ಮಾತನಾಡಿ, ಚುನಾವಣೆಯಲ್ಲಿ ಮಾತ್ರ ನಾವೆಲ್ಲ ಸ್ಪರ್ಧಿಗಳು ಅಯ್ಕೆಯಾದ ಬಳಿಕ ಎಲ್ಲರು ಒಂದೇ ಕಾರಣ ಆಡಳಿತಕ್ಕೆ ಸಹಕಾರ ನೀಡಿ ಎಂದರು.

ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪುರ ಮಾತನಾಡಿ, ಅಧಿಕಾರದ ಅಪೇಕ್ಷೆ ಪಟ್ಟವನಲ್ಲ ಸಂದರ್ಭ ಹಾಗೆ ಮಾಡಿದೆ ಚುನಾವಣೆಯಲ್ಲಿ ಸೋಲು ಗೆಲುವುಗಳನ್ನು ಲೆಕ್ಕಿಸದೇ ಎಲ್ಲರು ಕಾರ್ಯೋನ್ಮುಖ ರಾಗೋಣ ಎಂದು ತಿಳಿಸಿದರು.

ಖಜಾಂಚಿ ವಿಜಯಕುಮಾರ ಪತ್ತಾರ, ಪ್ರಧಾನ ಕಾರ್ಯದರ್ಶಿ ಭೀಮರಾಯ ಕೆಂಬಾವಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಲೀಮ್ ಪಟೇಲ ಮರ್ತೂರ, ಗಪೂರ ಮುಜಾವರ, ಆರೀಫ್ ಅಂತರಗಂಗಿ, ಇಸ್ಮಾಯಿಲ್ ಶೇಖ, ತೌಸೀಪ ನಾಟೀಕಾರ, ಮಹಿಬೂಬ ಮುಲ್ಲಾ ಇದ್ದರು.

Latest News

ಗೌರವ -ಘನತೆಯೇ ಮಾನವ ಹಕ್ಕಿನ ಮೂಲ: ಕರೆಪ್ಪ ಬೆಳ್ಳಿ

ಸಿಂದಗಿ: ಮನುಷ್ಯನಿಗೆ ಮೊದಲು ಗೌರವ ಮತ್ತು ಘನತೆ ಇರಬೇಕು. ಜಾತಿ—ಧರ್ಮ ಯಾವ ಬೇಧ ಭಾವವೂ ಇಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ. ನಾವು ಎಲ್ಲರೂ ಮಾನವೀಯ ಮೌಲ್ಯಗಳನ್ನು...

More Articles Like This

error: Content is protected !!
Join WhatsApp Group