ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವು

Must Read

ಬೀದರ – ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ(ಬಿ) ಗ್ರಾಮದಲ್ಲಿ ಬುಧವಾರ ಸೋಯಾ ರಾಶಿ ಮಾಡುವ ಸಂದರ್ಭದಲ್ಲಿ, ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.

ವರವಟ್ಟಿ (ಬಿ) ಗ್ರಾಮದ ರೈತ ಮಹಿಳೆಯೊಬ್ಬರು ತನ್ನ ಎರಡು ಎಕರೆ ಹೊಲದಲ್ಲಿ ಬೆಳೆದ ಸೊಯಾ ರಾಶಿಯನ್ನು ಯಂತ್ರಕ್ಕೆ ಹಾಕುವ ಸಂದರ್ಭದಲ್ಲಿ ಅವಳ ಸೀರೆ ಸೆರಗು ಜೊತೆಗೆ ತಲೆಗೆ ಕಟ್ಟಿಕೊಂಡ ಬಟ್ಟೆ ರಾಶಿ ಯಂತ್ರಕ್ಕೆ ಸಿಲುಕಿದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಗ್ರಾಮದ ಸಂಗೀತಾ ಶ್ರೀಹರಿ ಬಿರಾದಾರ (32) ಮೃತಪಟ್ಟ ರೈತ ಮಹಿಳೆಯಾಗಿದ್ದಾಳೆ.

ಘಟನಾ ಸ್ಥಳಕ್ಕೆ ಉಪ ತಹಸಿಲ್ದಾರರು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯನ್ನು ವೀಕ್ಷಿಸಲು ಬಂದ ಗ್ರಾಮದ ಹೆಣುಮಕ್ಕಳು ಆಕ್ರಂದನ ಮುಗಿಲು ಮುಟ್ಟಿತ್ತು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group