ಬಿಪಿನ್​ ರಾವತ್ ನಿಧನಕ್ಕೆ – ಸಂಸದ ಕಡಾಡಿ ಸಂತಾಪ

Must Read

ಮೂಡಲಗಿ: ನಮ್ಮ ದೇಶದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೇರಿದಂತೆ ಪತ್ನಿ ಹಾಗೂ ಸೇನಾ ಪಡೆಯ ಇತರ 12 ಮಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವುದು ಮನಸ್ಸಿಗೆ ನೋವು ತಂದಿದೆ. ಇದು ನಮ್ಮ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.

ಬುಧವಾರ ಡಿ.08 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಜಿ ಅವರು ಪ್ರಯಾಣಿಸುತ್ತಿದ್ದ ಭಾರತೀಯ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿರುವ ಆತಂಕಕಾರಿ ವಿಷಯ ಈ ಆಕಸ್ಮಿಕ ನಿಧನ ಭಾರತೀಯ ಸೇನಾ ಪಡೆಗೆ ತುಂಬಲಾರದ ನಷ್ಟವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಬಿಪಿನ್ ರಾವತ್ ಜಿ ಪರಮದೇಶ ಭಕ್ತ, ಅತ್ಯುನ್ನತ ಯೋಧ, ರಕ್ಷಣಾ ಇಲಾಖೆಯ ಮೂರು ಪಡೆಗಳ ಮಧ್ಯೆ ಸಮನ್ವಯ ಕಾಯ್ದುಕೊಂಡು ರಾಷ್ಟ್ರದ ರಕ್ಷಣೆಗಾಗಿ ಕಂಕಣ ಕಟ್ಟಿ ಕೆಲಸ ನಿರ್ವಹಿಸುತಿದ್ದರು ಎಂದು ಅವರ ಕಾರ್ಯಗಳನ್ನು ಸ್ಮರಿಸಿದರು.

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group