spot_img
spot_img

ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ದೀಪಿಕಾ ರೆಡ್ಡಿ ಪ್ರಚಾರ

Must Read

- Advertisement -

ಸಿಂದಗಿ: ಉಪಚುನಾವಣೆಯ ನಿಮಿತ್ತವಾಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪರವಾಗಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್ ಆರ್ ದೀಪಿಕಾ ರೆಡ್ಡಿ ವಾರ್ಡನಂ 1 ರಲ್ಲಿ ಯುವಕರೊಂದಿಗೆ ಮನೆಮನೆಗೆ ಮತಯಾಚನೆ ಮಾಡಿದರು.

ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಹಿಂದೆ ಸಿದ್ದರಾಮಯ್ಯ ಸರಕಾರದಲ್ಲಿ ನೀಡಲಾಗಿರುವ ಭಾಗ್ಯಗಳನ್ನು ಇಲ್ಲಿನ ಜನರು ತುಂಬಾ ಸ್ವೀಕರಿಸುತ್ತಿದ್ದಾರೆ, ಅವರ ಯೋಜನೆಗಳು,ವಿವಿಧ ಭಾಗ್ಯಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ನಮ್ಮ ಅಭ್ಯರ್ಥಿ ಅಶೋಕ ಮನಗೂಳಿ ಅವರ ತಂದೆ ದಿ,ಎಂ ಸಿ ಮನಗೂಳಿ ಅವರು 2 ವರ್ಷದ ಅವಧಿಯಲ್ಲಿ ಮಾಡಿರುವ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಜನರು ಮರೆತಿಲ್ಲ, ಹೀಗಾಗಿ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಮನಗೂಳಿ ಅವರ ಅಭಿವೃದ್ದಿ ಎರಡು ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆಯಾಗುತ್ತಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುರಪೂರ ಯುವ ಕಾಂಗ್ರೇಸ್ ಅಧ್ಯಕ್ಷ ರಾಜು ನಾಯಕ ಸೇರಿದಂತೆ ಪಟ್ಟಣದ ಯುವ ಕಾರ್ಯಕರ್ತರು ಸಾಥ್ ನೀಡಿದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group