ಮೂಡಲಗಿ: ಪಟ್ಟಣದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರು, ಕುಳಿತುಕೊಳ್ಳುವ ಆಸನ ಹೀಗೆ ಅನೇಕ ಸಮಸ್ಯೆಗಳಿಂದ ಮಹಿಳಾ ಪ್ರಯಾಣಿಕರು ಕೆಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕೆ.ಆರ್.ಎಸ್ ಪಕ್ಷದ ತಾಲೂಕಾಧ್ಯಕ್ಷ ಅಬ್ದುಲ್ ಪೈಲ್ವಾನ್ ಹೇಳಿದರು.
ಗುರುವಾರದಂದು ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕಾ ಘಟಕದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ, ಬಸ್ ನಿಲ್ದಾಣಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಸ್ಥಳೀಯ ಬಸ್ ನಿಲ್ದಾಣದ ವ್ಯವಸ್ಥಾಪಕರಿಂದ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ಈಗಾಗಲೇ ನಿಲ್ದಾಣದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಿ ಕೆಲವು ವರ್ಷಗಳೇ ಕಳೆದಿದೆ ಆದರೆ ಶೌಚಾಲಯ ನಿರ್ಮಾಣವಾದ ದಿನದಿಂದ ಶೌಚಾಲಯವನ್ನು ಉಪಯೋಗಿಸಲು ಬಿಡದೇ ಬೀಗ ಜಡಿಯಲಾಗಿದೆ. ಮಹಿಳಾ ಪ್ರಯಾಣಿಕರ ಗೋಳು ಕೇಳುವವರು ಯಾರು ಎಂದರು.
ಇನ್ನು ಬೇರೆ ಬೇರೆ ಊರುಗಳಿಂದ ಬಂದ ಮಹಿಳಾ ಪ್ರಯಾಣಿಕರು ಶೌಚಾಲಯಕ್ಕೆ ಬಸ್ ನಿಂದ ಕೆಳಗಿಳಿದು ಅವಸರವಾಗಿ ಶೌಚಾಲಯಕ್ಕೆ ತೆರಳಿದರೇ ಬೀಗ ಹಾಕಿರುವ ಶೌಚಾಲಯ ಕಂಡು ಇಲಾಖೆಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಒಂದು ವಾರ ಇಲಾಖೆಯ ಅಧಿಕಾರಿಗಳಿಗೆ ಗಡವು ನೀಡುತ್ತೇವೆ ಶೀಘ್ರವಾಗಿ ಮೇಲಾಧಿಕಾರಿಗಳು ಬಸ್ ನಿಲ್ದಾಣಕ್ಕೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ನೀಡದಿದ್ದರೇ ಬಸ್ ನಿಲ್ದಾಣದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೆ.ಆರ್.ಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಸೂರಮ್ಮ ಡಾಂಗೆ ಮಾತನಾಡಿ, ಬಸ್ ನಿಲ್ದಾಣದಲ್ಲಿ ಇರುವ ಸಾರ್ವಜನಿಕರ ಶೌಚಾಲಯದ ಸುತ್ತಲಿನ ಪರಿಸರದಲ್ಲಿ ದುರ್ವಾಸನೆ ಬೀರುತ್ತಿದ್ದು ಇದರಿಂದ ಮಹಿಳಾ ಪ್ರಯಾಣಿಕರಿಗೆ ಮೂಗು ಮುಚ್ಚಿ ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಡಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರಾದ ರಾಜೇಂದ್ರ ಪಾಟೀಲ, ಗಣಪತಿ ಬಡಿಗೇರ, ಸಿದ್ದಪ್ಪ ಡಾಂಗೆ, ಅನೀಲ ಗೌಡ, ರಫೀಕ ಪೈಲ್ವಾನ್, ಶಿವಕುಮಾರ ನಾವಿನ, ವಿಜಯ ಮಾದಿಗರ, ಬಾಸ್ಕರ ಡಾಂಗೆ, ಗೋಪಾಲ ನಾಯಕ್, ಶಿವಚಂದ್ರ ಗೊಂಡಲೆ, ಮಾದೇವ ಹುಚ್ಚನ್ನವರ ಹಾಗೂ ಅನೇಕರು ಇದ್ದರು.