Homeಸುದ್ದಿಗಳುಮೂಡಲಗಿ ತಾಲೂಕನ್ನು ಬರಪೀಡಿತ ಘೋಷಿಸಲು ಆಗ್ರಹ

ಮೂಡಲಗಿ ತಾಲೂಕನ್ನು ಬರಪೀಡಿತ ಘೋಷಿಸಲು ಆಗ್ರಹ

ಗುರ್ಲಾಪೂರ: ಪ್ರತಿ ವರ್ಷ ರೈತನಿಗೆ ಜೂನ್ ತಿಂಗಳು ಆಗಮಿಸುತ್ತಿದ್ದಂತೆ ಸಂತೋಷದಿಂದ ಕೃಷಿ ಕಾಯಕ ಮಾಡಲು, ಭೂತಾಯಿ ಮಡಿಲನ್ನು ತುಂಬುವ ತವಕದಿಂದ ಸಾಲ ಸೋಲ ಮಾಡಿಯಾದರು ಬೀಜ ಗೂಬ್ಬರ ಖರೀದಿಸಿ ರೈತರು ಒಕ್ಕಲುತನ ಮಾಡುತ್ತಿದ್ದರು.

ಆದರೆ ಈ ವರ್ಷ  ಮುಂಗಾರು ಬೆಳೆ ಬಿತ್ತನೆ ಮಾಡಿದ್ದರೂ ಮುಂಗಾರು ಮಳೆ ರಾಯ ಕೈಕೊಟ್ಟಿದ್ದರಿಂದ ರೈತನ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಲ್ಪ ಸ್ವಲ್ಪ ಮಳೆಯಲ್ಲಿ ಬೀಜ ಬಿತ್ತನೆ ಮಾಡಿದ್ದು  ಬೀಜಗಳು ಮೊಳಕೆಯೊಡೆಯದೆ ರೈತನಿಗೆ ಆಘಾತವಾಗಿದೆ ಮತ್ತೆ ಬಿಸಿಲಿನ ತಾಪದಿಂದ ಬಂದ ಬೆಳೆ ಕೂಡ ಒಣಗಿ ಹೋಗುವಂತಾಗಿದೆ ಆದ್ದರಿಂದ ಕೃಷಿ ಅಧಿಕಾರಿಗಳು, ಜನ ಪ್ರತಿನಿಧಿಗಳು ಮೂಡಲಗಿ ತಾಲೂಕಿನ ಪ್ರತಿ ಹಳ್ಳಿಗಳ ಸರ್ವೆ ಕಾರ್ಯ ಮಾಡಿ ರೈತನು ಬದುಕುವ ಸಲುವಾಗಿ ಸರಕಾರ ಸಹಾಯ ಸವಲತ್ತುಗಳನ್ನು ಒದಗಿಕೂಡುವದರ ಜೊತೆಗೆ ಮೂಡಲಗಿ ತಾಲೂಕನ್ನು ಸಂಪೂರ್ಣ ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು  ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಮೂಡಲಗಿ ತಾಲೂಕ ಘಟಕದ ಅಧ್ಯಕ್ಷರಾದ ಹನಮಂತ ಮುಗಳಖೋಡ ಹಾಗೂ ಉಪಾಧ್ಯಕ್ಷರಾದ ಶಿವಬಸು ನೇಮಗೌಡರ ಸರಕಾರವನ್ನು ಆಗ್ರಹಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group