spot_img
spot_img

ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Must Read

- Advertisement -

ಸಿಂದಗಿ: ದಲಿತಪರ ಚಿಂತಕ ಹಿಂದುಳಿದ ವರ್ಗಗಳ ನಾಯಕರಾಗಿರುವ ಕನಕಗಿರಿ ಮತಕ್ಷೇತ್ರದ ಅಭಿವೃದ್ಧಿಯ ಹರಿಕಾರ ಶಿವರಾಜ ತಂಗಡಗಿ ಅವರಿಗೆ ಸಾಮಾಜಿಕ ನ್ಯಾಯದಡಿ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕಾ ಭೋವಿ ವಡ್ಡರ ಸಮಾಜದ ಅಧ್ಯಕ್ಷ ಪಂಡಿತ ಯಂಪೂರೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಪ್ಪಳ ಜಿಲ್ಲೆಯ ಕನಕಗಿರಿ ಮೀಸಲು ಕ್ಷೇತ್ರದಲ್ಲಿ ಶಾಸಕರಾಗಿ, ಸಚಿವರಾಗಿ ಎಲ್ಲ ವರ್ಗಗಳಿಗೆ ನ್ಯಾಯಯುತವಾದ ಸೌಲಭ್ಯಗಳನ್ನು ಕೊಡುವಲ್ಲಿ ಅವಿರತ ಶ್ರಮಿಸಿದವರು ಅಲ್ಲದೆ ಭೋವಿ ವಡ್ಡರ ಸಮಾಜವನ್ನು ಕಟ್ಟುವಲ್ಲಿ ಇವರ ಪಾತ್ರ ಅಮೋಘವಾದದ್ದು ಅವರು ಇಡೀ ರಾಜ್ಯಾದ್ಯಂತ ಹೊರಡಿಸಿದ ಆದೇಶದಂತೆ ಕೊರಚ, ಕೊರಮ, ಬಂಜಾರ, ಭೋವಿ ಸಮಾಜಗಳ ಒಕ್ಕೂಟವು ನೀಡಿದ ನಿರ್ಣಯದಂತೆ ಬಿಜೆಪಿಯನ್ನು ತಿರಸ್ಕರಿಸಿ ಸಮಾಜವನ್ನು ಉಳಿಸಿ ಎನ್ನುವ ಸಂದೇಶದೊಂದಿಗೆ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣೀಕರ್ತರಾಗಿದ್ದಾರೆ.

ಅಲ್ಲದೆ ಭೋವಿ ಸಮಾಜದ ಕಟ್ಟಕಡೆಯ ನೊಂದ ವ್ಯಕ್ತಿಯ ನಾಡಿಮಿಡಿತವನ್ನು ಅರಿತ ಅನುಭವಿ ನಾಯಕರಾಗಿರುವ ಅವರು ಶಾಸಕರಾಗಿ. ಸಚಿವರಾಗಿ ಕಾರ್ಯರ್ನಿಹಿಸಿದ ಅನುಭವಹೊಂದಿದ್ದಾರೆ ಇಡೀ ರಾಜ್ಯವು ಒಕ್ಕೂರಲಿಂದ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣೀಕರ್ತರಾದ ಶಿವರಾಜ ತಂಗಡಗಿ ಅವರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿದರೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಕಾರಣ 2 ಹಂತದ ಸಚಿವ ಸಂಪುಟದಲ್ಲಿ ಇವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಎಸ್‍ಸ್ಸಿ ಮೋರ್ಚಾ ನಗರ ಘಟಕ ಅದ್ಯಕ್ಷ ತಿರುಪತಿ ಬಂಡಿವಡ್ಡರ ಒತ್ತಾಯಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group