ವಿಕಲಚೇತನರ ಬೇಡಿಕೆ ಈಡೇರಿಕೆಗೆ ಮನವಿ

Must Read

ಕೊಪ್ಪಳ: ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಸತಿ ಸಚಿವರಾದ ವಿ.ಸೋಮಣ್ಣ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರದಿಂದ ನೀಡಲಾಗುವ ಮನೆಗಳಲ್ಲಿ ವಿಕಲಚೇತನರಿಗೆ ಮೀಸಲಿಡಬೇಕಾದ ಮನೆಗಳನ್ನು ಮೀಸಲಿಡದೇ ಪ್ರಭಾವ ಬಳಸಿ ಬೇರೆಯವರು ಅದರ ಸೌಲಭ್ಯವನ್ನು ಪಡೆಯುತ್ತಿದ್ದು, ಕೂಡಲೇ ಸರಕಾರವು ವಿಕಲಚೇತನರಿಗೆ ಕಡ್ಡಾಯವಾಗಿ ವಿವಿಧ ಯೋಜನೆಗಳನ್ನು ನೀಡಲಾಗುವ ಮನೆಗಳ ಹಂಚಿಕೆಯಲ್ಲಿ ವಿಕಲಚೇತನರಿಗೆ ಶೇಕಡಾ ೫ ರಷ್ಟು ಮನೆಗಳನ್ನು ಮೀಸಲಿಡುವುದರ ಜೊತೆಗೆ ಅದರ ಸಮರ್ಪಕವಾದ ರೀತಿಯಲ್ಲಿ ಅನುಷ್ಟಾನ ಆಗುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ಮಾಡಬೇಕು ಹಾಗೂ ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ವತಿಯಿಂದ ನೀಡಲಾಗುವ ನಿವೇಶನ ಹಾಗೂ ಮನೆಗಳ ಹಂಚಿಕೆಯಲ್ಲಿ ವಿಕಲಚೇತನ ನೌಕರರ ಶೇಕಡಾ ೫ ರಷ್ಟು ಮನೆ ಹಾಗೂ ನಿವೇಶನಗಳನ್ನು ಮೀಸಲಿಡುವುದರ ಜೊತೆಗೆ ವಿಕಲಚೇತನ ನೌಕರರ ಖರೀದಿ ಮಾಡುವ ನಿವೇಶನ ಹಾಗೂ ಮನೆಯ ಹಣದ ಮೇಲೆ ಶೇಕಡಾ ೨೫ ರಷ್ಟು ಹಣವನ್ನು ರಿಯಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಬಳಿಕ ಸಚಿವರಾದ ವಿ.ಸೋಮಣ್ಣ ಮಾತನಾಡುತ್ತಾ,ನಿಮ್ಮ ಸಂಘದ ಬೇಡಿಕೆಗಳು ನ್ಯಾಯಯುತವಾಗಿದ್ದು,ಅವುಗಳ ಬಗ್ಗೆ ಅಧಿಕಾರಿಗಳು ಜೊತೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಅಲ್ಲದೇ ಎಲ್ಲಾ ಯೋಜನೆಗಳನ್ನು ವಸತಿಗಳ ಹಂಚಿಕೆಯಲ್ಲಿ ವಿಕಲಚೇತನರಿಗೆ ಮೀಸಲಾತಿ ನೀಡುವಂತೆ ಹಾಗೂ ಅದರ ಸಮರ್ಪಕವಾದ ರೀತಿಯಲ್ಲಿ ಅನುಷ್ಠಾನ ಮಾಡುವಂತೆ ಜೊತೆಗೆ ಅದರ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸುತ್ತೆನೆ ಎಂದು ಹೇಳಿದರು.

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group