ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

Must Read

ನಿಪ್ಪಾಣಿ – ಗಡಿ ಪಟ್ಟಣ ನಿಪ್ಪಾಣಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದು ಅವರಿಂದ ಒಂದು ಕಿಲೋಗಿಂತ ಹೆಚ್ಚಿನ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸುಹೇಲ್ ಶಬ್ಬೀರ ದೇಸಾಯಿ ಹಾಗೂ ಹಮೀದ ಸಲೀಮ್ ಶೇಖ್ ಎಂಬಿಬ್ಬರು ಬಂಧಿತರು.

ಈ ಖದೀಮರು ಮತ್ತೆ ನಗರದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ನಗರ ಪೊಲೀಸರು ಇಬ್ಬರನ್ನೂ ಬಂಧಿಸಿ ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ‌.

ಪೊಲೀಸ್ ವರಿಷ್ಠಾಧಿಕಾರಿ ಸಂಗಮೇಶ ಶಿವಯೋಗಿ, ಶಹರ ಪೊಲೀಸ್ ಠಾಣಾ ನಿರೀಕ್ಷಕರಾದ ಕೃಷ್ಣವೇಣಿ ಗುರ್ಲಹೊಸೂರ ಹಾಗೂ ಶೇಖರ ಅಸೋದೆ, ಸುದರ್ಶನ ಅಸ್ಕಿ, ಉದಯ ಕಾಂಬಳೆ, ಎಸ್ ಎಸ್ ಚಿಕ್ಕೋಡೆ, ಬಸವರಾಜ ನಾವಿ, ಪೋಪಟ್ ಐನಾಪುರೆ ಹಾಗೂ ತಹಶೀಲ್ದಾರ ಮೋಹನ ಭಸ್ಮೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Latest News

ಕವನ : ಕವಿತೆಗೊಂದು ಕರೆಯೋಲೆ

ಕವಿತೆಗೊಂದು ಕರೆಯೋಲೆ ಬರೆಯಲೆಂದು ಕುಳಿತ ನನಗೆ ಪದಗಳೇ ಸಿಗುತಿಲ್ಲ... ನುಡಿಗಳೆಲ್ಲ ಮುನಿಸಿಕೊಂಡು ದೂರ ಓಡುತಿವೆಯಲ್ಲ...!ಬೆರಳುಗಳಿಗೂ ಲೇಖನಿಗೂ ಒಳಗೊಳಗೆ ನಡೆಯಿತಾ? ಒಳಜಗಳ!! ಮನಃಪಟದಲೋ ಸಾವಿರಾರು ಅಕ್ಷರ ಬಳಗ... ಕವಿತೆ ಕಟ್ಟಲದೇಕೋ ಆಗದೆ ಸಾಗಿದೆ ಕಾಳಗ...ಪ್ರೀತಿಯಿಂದ ಕವಿತೆಗೊಂದು ಓಲೆ ಬರೆದು...

More Articles Like This

error: Content is protected !!
Join WhatsApp Group