- ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ಸಾಹಿತಿ- ಸಂಘಟಕ ಡಾ.ಸಿಸಿರಾ ರವರಿಗೆ
- ‘ದತ್ತ ಸಾಮ್ರಾಟ್’ ಪ್ರಶಸ್ತಿ ಪ್ರದಾನ
ಬೆಂಗಳೂರು: ನಗರದ ರಾಜರಾಜೇಶ್ವರಿ ನಗರದ ಬಾಲಕೃಷ್ಣ ಬಯಲು ರಂಗಮಂದಿರದಲ್ಲಿ ಇದೇ ಭಾನುವಾರ ಡಿ.25 ಸಂಜೆ 5.00ಕ್ಕೆ ದತ್ತಶ್ರೀ ಸಾಂಸ್ಕೃತಿಕ ವೇದಿಕೆ ವತಿಯಿಂದ ಧನುರ್ಮಾಸ ಸಂಗೀತೋತ್ಸವ- ದತ್ತ ಸಾಮ್ರಾಟ್ ಪ್ರಶಸ್ತಿ ಪ್ರದಾನ- ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ.
ತೋಟಗಾರಿಕೆ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಮುನಿರತ್ನ ಸಮಾರಂಭ ಉದ್ಘಾಟಿಸಲಿದ್ದು ,ಎಂ ಇ ಎಸ್ ರಂಗಶಾಲೆ ಪ್ರಾಂಶುಪಾಲ ಡಾ.ಅಶ್ವಥ್ ನಾರಾಯಣ ಕೆ.ಪಿ ಅಧ್ಯಕ್ಷತೆಯಲ್ಲಿ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ಸಾಹಿತಿ- ಸಂಘಟಕ ಡಾ.ಸಿಸಿರಾ ರವರಿಗೆ ‘ದತ್ತ ಸಾಮ್ರಾಟ್’ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯುವ ಈ ಕಲಾ ಸಮ್ಮಿಲನದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ ವಿಕಾಸ ಪರಿಷತ್ ಅಧ್ಯಕ್ಷ ರಘುನಾಥ್ , ಪತ್ರಕರ್ತ ನ. ಸುಧೀಂದ್ರರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಚಂದ್ರಶೇಖರ್ ಮೊದಲಾದ ಗಣ್ಯರು ಭಾಗವಹಿಸುವರು.
ಗುರು ಶ್ರೀಮತಿ ಮೋನಿಷಾ ನವೀನ್ ರವರ ನಾಟ್ಯ ಸನ್ನಿಧಿ ಭರತನಾಟ್ಯ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ವೈಭವ ,ಸಂತವಾಣಿ ಸುಧಾಕರ್ , ರಾಜೇಶ್ ಆನೇಕಲ್, ದತ್ತಶ್ರೀ , ರವಿ ಇಗ್ಗಲೂರು, ಚೈತ್ರ ಹೆಬ್ಬಗೋಡಿ, ವೀರೇಶ್,ನರಸಿಂಹ, ವಾಸುಕಿ ಪ್ರಸಾದ್ ,ಭಾಗ್ಯಲಕ್ಷ್ಮಿ , ಸಾಯಿ ಪವನ್ ಹಾಗು ಸತ್ಯವತಿ ರವೀಂದ್ರ ರವರ ತಂಡದಿಂದ ಸುಮಧುರ ಗಾಯನ ಸಂಜೆ ಏರ್ಪಡಿಸಲಾಗಿದೆ ಎಂದು ಆಧ್ಯಕ್ಷರಾದ ಭಾಸ್ಕರ್ ಮೂರ್ತಿ ತಿಳಿಸಿರುತ್ತಾರೆ.