ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ತಾಲೂಕಾ ಘಟಕ ಮೂಡಲಗಿ ನೇತೃತ್ವದಲ್ಲಿ ಮೇ 7 ರಂದು ಶನಿವಾರ ಮುಂಜಾನೆ 9 ಘಂಟೆಗೆ ಸಮೀಪದ ಗುರ್ಲಾಪುರ ನಿರೀಕ್ಷಣಾ ಮಂದಿರ (IB) ಹತ್ತಿರ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರದಲ್ಲಿ ಅಸಡ್ಡೆ ಹಾಗೂ ವಿಳಂಬವನ್ನು ಖಂಡಿಸಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಮೂಡಲಗಿ ತಾಲೂಕಾ ಪಂಚಮಸಾಲಿ ಸಮಾಜದ ಗುರು ಹಿರಿಯರು ಯುವಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ಧೋರಣೆಯನ್ನು ಖಂಡಿಸಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟೋಣ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂಬುದಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ (ರಿ) ತಾಲ್ಲೂಕು ಘಟಕ ಮೂಡಲಗಿಯ ಅಧ್ಯಕ್ಷ ಬಸವರಾಜ ಪಾಟೀಲ ಕೋರಿದ್ದಾರೆ.