Homeಸುದ್ದಿಗಳುಜಿಲ್ಲಾ ಸರ್ಜನ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ..!

ಜಿಲ್ಲಾ ಸರ್ಜನ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ..!

ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ‌ ಕೋರೋನಾ ವೈರಸ್ ರೆಡ್ ಝೋನ್ ನಲ್ಲಿ ಇದೆ. ರಾಜ್ಯ ಸರ್ಕಾರ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಸ್ವಲ್ಪ ಕೋರೋನಾ ವೈರಸ್ ಹತೋಟಿಗೆ ಬಂದಿತ್ತು.

ಬೀದರ್ ಜಿಲ್ಲಾ ಅಧಿಕಾರಿ ರಾಮಚಂದ್ರನ್ ಆರ್. ಅವರು ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳ ಮೀಟಿಂಗ್ ಕರೆದು ಜಿಲ್ಲಾ ಕೋರೋನಾ ವೈರಸ್ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾಕ್ಟರ್ ರತಿಕಾಂತ ಸ್ವಾಮಿ ಅವರು ಅಸ್ವಸ್ಥರಾಗಿ ಮೀಟಿಂಗ್ ಹಾಲ್ ನಲ್ಲಿ ಕುಸಿದು ಬಿದ್ದು ಘಟನೆ ನಡೆಯಿತು.

ತಕ್ಷಣವೇ ಜಿಲ್ಲಾ ಸರ್ಜನ್ ಡಾಕ್ಟರ್ ರತಿಕಾಂತ ಸ್ವಾಮಿ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಾ ಇರುವುದನ್ನು ನೋಡಿದರೆ ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.

ಜಿಲ್ಲಾ ಸರ್ಜನ್ ರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ವಿಷಯ ಬೀದರ್ ಸಾರ್ವಜನಿಕರಲ್ಲಿ ಗುಸು ಗುಸು ಚರ್ಚೆಗೆ ಎಡೆ ಮಾಡಿಕೊಟ್ಟಿದ್ದು ಸರ್ಕಾರಿ ಡಾಕ್ಟರ್ ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬಹುದಿತ್ತು ಆದರೆ ಯಾಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಪ್ರಶ್ನೆ ಮೂಡಿ, ವೈದ್ಯರಿಗೇ ತಮ್ಮ ಆಸ್ಪತ್ರೆಯ ಮೇಲೆ ನಂಬಿಕೆ ಇಲ್ಲವೋ ಅಥವಾ ಬಡವರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ ಇದೆಯಾ ಎಂದು ಬೀದರ್ ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

RELATED ARTICLES

Most Popular

error: Content is protected !!
Join WhatsApp Group