spot_img
spot_img

ಡಿಕೆಶಿ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದ್ದಾರೆ – ಚಂದ್ರ ಸಿಂಗ್ ಆರೋಪ

Must Read

- Advertisement -

ಬೀದರ: ರಾಜಕೀಯ ಹಿನ್ನೆಲೆಯೇ ಇರದ ಅಶೋಕ ಖೇಣಿಯವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟನ್ನು  ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಅಳಿಯ ಚಂದ್ರ ಸಿಂಗ್ ಆರೋಪಿಸಿದ್ದಾರೆ

ಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಅಶೋಕ ಖೇಣಿ ಮತ್ತು ಡಿ ಕೆ ಶಿವಕುಮಾರ್ ಬಿಸಿನೆಸ್ ಪಾಲುದಾರರಾಗಿದ್ದಾರೆ. ಅಶೋಕ ಖೇಣಿ ಗೆ ಸರಿಯಾಗಿ ಮಾತಾಡಲು ಬರೋದಿಲ್ಲ. ಕ್ಷೇತ್ರದಲ್ಲಿ ಅವರನ್ನು ಯಾರೂ ಗುರುತು ಕೂಡ ಹಿಡಿಯುವುದಿಲ್ಲ ಅಂಥವರಿಗೆ ಟಿಕೆಟ್ ಕೊಟ್ಟು ಕಾಂಗ್ರೆಸ್ ಪಕ್ಷ ಕೇವಲ ದುಡ್ಡು ಇದ್ದವರಿಗೆ ಮಾತ್ರ ಟಿಕೆಟ್ ನೀಡುವುದನ್ನು ಸಾಬೀತುಪಡಿಸಿದ್ದಾರೆ ಎಂದರು.

ಖೇಣಿಯವರಿಗೆ ಟಿಕೆಟ್ ಕೊಡುವಲ್ಲಿ ಜಿಲ್ಲೆಯಿಂದ ಹಿಡಿದು ರಾಜ್ಯದವರೆಗೂ ನಾಯಕರ ಪಿತೂರಿ ಇದೆ ಎಂದು ಆರೋಪಿಸಿದ ಅವರು, ತಮಗೆ ಟಿಕೆಟ್ ಕೊಡದೆ ಇದ್ದರೆ ತಾವು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದರು.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group