ಹಿರಿಯ ಜಾನಪದ ಕಲಾವಿದ ನಿoಗೌಡ ಪಾಟೀಲ ರವರಿಗೆ ಗೌ. ಡಾಕ್ಟರೇಟ್ ಪುರಸ್ಕಾರ

Must Read

ತಮಿಳುನಾಡು ಹೊಸೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಪೂಜ್ಯ ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ಸಂಸ್ಕೃತಿ ಚಿಂತಕ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದ ಗಣ್ಯಮಾನ್ಯರ ಸಮಕ್ಷಮದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಯಮಕನಮರಡಿ ಮಾಸ್ತಿ ಹೊಳೆಯ ಹಿರಿಯ ಜಾನಪದ ಕಲಾವಿದ ಗಾಯಕ ನಿಂಗೌಡ ಪಾಟೀಲ  ಅವರು ಭಾಜನರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ದ ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡುತ್ತ ಎಲೆ ಮರೆಯ ಕಾಯಿಯಂತೆ ಸದ್ದಿಲ್ಲದೆ ಸೇವೆ ಮಾಡುತ್ತಿರುವ ಸಾಧಕರನ್ನು ಗೌರವಿಸುವ ಈ ಕಾರ್ಯ ಅಭಿನಂದನೀಯ. ಸರ್ಕಾರ ಗುರುತಿಸಿ ಉನ್ನತ ಪುರಸ್ಕಾರಗಳು ಲಭಿಸುವಂತಾಗಲಿ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಯಮಕನಮರಡಿಯ ಕರಕುಶಲ ಕಲಾವಿದ ಸೋಮಶೇಖರ ಹೊರಕೇರಿಯವರಿಗೆ ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಶ್ರೀಯುತರು 550 ಸಾಮೂಹಿಕ ವಿವಾಹಗಳಿಗೆ ಬಾಸಿಂಗವನ್ನು ಉಚಿತವಾಗಿ ನೀಡಿರುತ್ತಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group