ಹಿರಿಯ ಜಾನಪದ ಕಲಾವಿದ ನಿoಗೌಡ ಪಾಟೀಲ ರವರಿಗೆ ಗೌ. ಡಾಕ್ಟರೇಟ್ ಪುರಸ್ಕಾರ

Must Read

ತಮಿಳುನಾಡು ಹೊಸೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಪೂಜ್ಯ ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ಸಂಸ್ಕೃತಿ ಚಿಂತಕ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದ ಗಣ್ಯಮಾನ್ಯರ ಸಮಕ್ಷಮದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಯಮಕನಮರಡಿ ಮಾಸ್ತಿ ಹೊಳೆಯ ಹಿರಿಯ ಜಾನಪದ ಕಲಾವಿದ ಗಾಯಕ ನಿಂಗೌಡ ಪಾಟೀಲ  ಅವರು ಭಾಜನರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ದ ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡುತ್ತ ಎಲೆ ಮರೆಯ ಕಾಯಿಯಂತೆ ಸದ್ದಿಲ್ಲದೆ ಸೇವೆ ಮಾಡುತ್ತಿರುವ ಸಾಧಕರನ್ನು ಗೌರವಿಸುವ ಈ ಕಾರ್ಯ ಅಭಿನಂದನೀಯ. ಸರ್ಕಾರ ಗುರುತಿಸಿ ಉನ್ನತ ಪುರಸ್ಕಾರಗಳು ಲಭಿಸುವಂತಾಗಲಿ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಯಮಕನಮರಡಿಯ ಕರಕುಶಲ ಕಲಾವಿದ ಸೋಮಶೇಖರ ಹೊರಕೇರಿಯವರಿಗೆ ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಶ್ರೀಯುತರು 550 ಸಾಮೂಹಿಕ ವಿವಾಹಗಳಿಗೆ ಬಾಸಿಂಗವನ್ನು ಉಚಿತವಾಗಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here

Latest News

ರೈತರು ಸಾವಯವ ಕೃಷಿ ಮಾಡಿ ಭೂಮಿಯ ಫಲವತ್ತತೆ ಕಾಯಬೇಕು – ಸಹದೇವ ಯರಗೊಪ್ಪ

ಮೂಡಲಗಿ: ’ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿ ಮಾಡುವ ಮೂಲಕ ಭೂಮಿಯ ಫಲವತ್ತತೆಯನ್ನು ವೃದ್ಧಿಸುವ ಜೊತೆಗೆ ಸಮಾಜದ ಆರೋಗ್ಯವನ್ನು ಕಾಯುವುದು ಅವಶ್ಯವಿದೆ’ ಎಂದು ಚಿಕ್ಕೋಡಿ ಉಪ...

More Articles Like This

error: Content is protected !!
Join WhatsApp Group