spot_img
spot_img

ನಾನು ಮಾತ್ರನೇ ಎಂಬ ಭ್ರಮೆ ಬೇಡ

Must Read

spot_img
- Advertisement -

ಮೂಡಲಗಿ: ಆತ್ಮವಿಶ್ವಾಸ ಇರಲಿ ಅಹಂಕಾರ ಬೇಡ ನಾನು ಅನ್ನೋ ಸ್ಥೈರ್ಯ ಇರಲಿ ನಾನು ಮಾತ್ರನೇ ಎಂಬ ಭ್ರಮೆ ಬೇಡ ಎಂದು ಹೇಳಿದ ಕೃಷ್ಣ ಪರಮಾತ್ಮನು ಪ್ರತಿಯೊಬ್ಬರು ಭಕ್ತಿಯಿಂದ ಪೂಜಿಸಿದರೆ ಮುಕ್ತಿ ಪಡೆಯಲು ಸಾಧ್ಯ ಎಂದು ಸಾಹಿತಿ ಲಕ್ಷ್ಮಿ ಜೋಸೆಫ್ ಬೈಲಾ ಹೇಳಿದರು.

ಪಟ್ಟಣದ ಆರ.ಡಿ.ಎಸ್ ಸೊಸೈಟಿಯ ಅಂಗಸಂಸ್ಥೆಯಾದ ವಿದ್ಯಾನಿಕೇತನ ಸಿ.ಬಿ.ಎಸ್.ಇ ಶಾಲೆಯಲ್ಲಿ ಜರುಗಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಣದ ಜೊತೆಗೆ ಮಹಾಭಾರತ, ರಾಮಾಯಣ ಕಥೆಗಳನ್ನು ಕೇಳಿ ಅದರಲ್ಲಿ ಇರುವಂಥ ವಿಷಯಗಳನ್ನು ಅರಿತುಕೊಳ್ಳಬೇಕು ಎಂದರು.

ಶಾಲೆಯ ಪ್ರಾಂಶುಪಾಲರು ಜೋಸೆಫ್ ಎಸ್.ಬಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯ ವಿದ್ಯೆಯೊಂದಿಗೆ ವಿನಯ ಬೆಳೆಸಿಕೊಳ್ಳಬೇಕು ಹಾಗೂ ದೇವರು ಧರ್ಮದಲ್ಲಿ ಶ್ರದ್ಧೆ ಉಳ್ಳವರಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

- Advertisement -

ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳು ಶ್ರೀ ಕೃಷ್ಣ  ಮತ್ತು ರಾಧೆಯ ವೇಷಭೂಷಣದಲ್ಲಿ ಗಮನ ಸೆಳೆದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಸುನಿತಾ ಸುಣದೊಳಿ, ಸೌಜನ್ಯ ಮಿರಾಶಿ, ಶಿಕ್ಷಕ ಆನಂದ ಕಂಬಾರ ಹಾಗೂ ಶಿಕ್ಷಕ ವೃಂದ, ಶಾಲಾ ಮಕ್ಕಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಪುಸ್ತಕ ವಿಶ್ಲೇಷಣೆ : ಹನಿಗವನಗಳ ರಸಪಾಕ ‘ಹಾಸ್ಯ ಸವಿ’

ಇತ್ತೀಚಿಗೆ ಹನಿಗವಿಗಳ ಮತ್ತು ಹನಿಗವಿತೆಗಳ ಬೆಳೆ ಹುಲುಸಾಗಿದೆ. ಇದಕ್ಕೆ ಸಮೂಹ ಮಾಧ್ಯಮಗಳ ಕಾಣಿಕೆ ಅಪಾರ. ಒಂದು ಅಂಶ ಗಮನಿಸಬೇಕು. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯವಲ್ಲ ಮತ್ತು...
- Advertisement -

More Articles Like This

- Advertisement -
close
error: Content is protected !!
Join WhatsApp Group